ಬೆಂಗಳೂರು: ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಹಾಗೂ ಮೇಲ್ವಿಚಾರಣೆಗೆ ರಚಿಸಲಾಗಿರುವ ಜಿಲ್ಲೆ ಮತ್ತು ತಾಲೂಕು ಮಟ್ಟದ ಸಮಿತಿಗಳ ಪದಾಧಿಕಾರಿಗಳಿಗೂ ಗೌರವಧನ ಮತ್ತು ಭತ್ಯೆಗಳನ್ನು ನಿಗದಿಪಡಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಸಮಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಇರುವ ಸಮಿತಿಗಳು ತಿಂಗಳಿಗೆ ಗರಿಷ್ಠ 2 ಸಭೆಗಳನ್ನು ನಡೆಸಬಹುದು.
ಸಭೆಗೆ ಪಂಚಾಯಿತಿ ಸಭಾಭವನ
ಗ್ಯಾರಂಟಿ ಯೋಜನೆಗಳು ನಾನಾ ಇಲಾಖೆ ಮೂಲಕ ಅನುಷ್ಠಾನಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಮನ್ವಯ ಸಾಧಿಸುವ ದೃಷ್ಟಿಯಿಂದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿಯನ್ನು ನೋಡಲ್ ಅಧಿಕಾರಿಯಾಗಿ ನೇಮಿಸಲಾಗಿದೆ. ಜಿಲ್ಲಾ ಸಮಿತಿಗಳು ಸಭೆ ನಡೆಸಲು ಜಿಲ್ಲಾ ಪಂಚಾಯತ್ ಸಭಾಂಗಣ ಹಾಗೂ ತಾಲೂಕು ಸಮಿತಿಗಳು ತಾಲೂಕು ಪಂಚಾಯತ್ ಸಭಾಂಗಣಗಳನ್ನು ಬಳಸಿಕೊಳ್ಳಲು ಅನುಮತಿ ನೀಡಲಾಗಿದೆ.
ಲೈಂಗಿಕ ಶಕ್ತಿ ಹೆಚ್ಚಿಸಿಕೊಳ್ಳಬೇಕೆ..? ಹಾಗಿದ್ರೆ ಈ ಆಹಾರವನ್ನು ಸೇವಿಸಿ ಸಾಕು
ಬಿಬಿಎಂಪಿ ಅನುಷ್ಠಾನ ಸಮಿತಿಗೆ ವಿಶೇಷ ಆಯುಕ್ತರು (ಆಡಳಿತ) ಸದಸ್ಯ ಕಾರ್ಯದರ್ಶಿಯಾಗಿದ್ದು, ಪ್ರಧಾನ ಕಚೇರಿ ಆವರಣದಲ್ಲಿ ಸಭೆಗೆ ಬೇಕಾದ ಪೀಠೋಪಕರಣ ವ್ಯವಸ್ಥೆ ನಿಭಾಯಿಸಲಿದ್ದಾರೆ. ಜಿಲ್ಲಾ ಸಮಿತಿಗಳಿಗೆ ಸಂಬಂಧಿತ ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿ ಕಚೇರಿ ವ್ಯವಸ್ಥೆ ಹಾಗೂ ಅಗತ್ಯವಿರುವ ಪೀಠೋಪಕರಣ ಒದಗಿಸುವ ಹೊಣೆಗಾರಿಕೆಯನ್ನು ಜಿಲ್ಲಾ ಪಂಚಾಯತ್ ಸಿಇಒಗಳಿಗೆ ನೀಡಲಾಗಿದೆ.
ತಾಲೂಕು ಸಮಿತಿಗಳಿಗೆ ತಾಲೂಕು ಪಂಚಾಯತ್ ಕಚೇರಿ ಆವರಣದಲ್ಲಿ ಕಚೇರಿ ಹಾಗೂ ಪೀಠೋಪಕರಣ ಒದಗಿಸುವ ವ್ಯವಸ್ಥೆಯನ್ನು ಆಯಾ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾ ಅಧಿಕಾರಿ ಮಾಡಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ನಡೆಸುವ ಜಿಲ್ಲಾ ತ್ರೈಮಾಸಿಕ ಕೆಡಿಪಿ ಸಭೆಗೆ ಗ್ಯಾರಂಟಿ ಸಮಿತಿಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರನ್ನು ಆಹ್ವಾನಿಸುವುದು ಕಡ್ಡಾಯವಾಗಿದ್ದು, ತಾಲೂಕು ಮಟ್ಟದಲ್ಲಿ ಸ್ಥಳೀಯ ಶಾಸಕರು ನಡೆಸುವ ಕೆಡಿಪಿ ಸಭೆಗೆ ತಾಲೂಕು ಮಟ್ಟದ ಸಮಿತಿ ಅಧ್ಯಕ್ಷರನ್ನು ಆಹ್ವಾನಿಸಬೇಕು ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
ಸಮಿತಿ ಸದಸ್ಯರಲ್ಲಿ ಯಾರಿಗೆ ಎಷ್ಟು ಗೌರವ ಧನ?
ಜಿಲ್ಲಾ ಸಮಿತಿಗಳಲ್ಲಿ ಅಧ್ಯಕ್ಷರಿಗೆ ಮಾಸಿಕ 40 ಸಾವಿರ ರೂ ಗೌರವ ಧನ ನಿಗದಿಪಡಿಸಲಾಗಿದೆ. ಉಪಾಧ್ಯಕ್ಷರಿಗೆ ಪ್ರತಿ ಸಭಗೆ 1200 ರೂ ಭತ್ಯೆ ನಿಗದಿಪಡಿಸಲಾಗಿದೆ. ಹಾಗೆಯೇ ಸಮಿತಿ ಸದಸ್ಯರಿಗೆ 1,100 ರೂ ಭತ್ಯೆ ನೀಡಲಾಗುತ್ತದೆ. ತಾಲೂಕು ಮಟ್ಟದ ಸಮಿತಿಗಳಲ್ಲಿ ಅಧ್ಯಕ್ಷರಿಗೆ 25 ಸಾವಿರ ರೂ ಮಾಸಿಕ ಗೌರವ ಧನ ನೀಡಲು ಆದೇಶ ಹೊರಡಿಸಲಾಗಿದೆ. ಹಾಗೆಯೇ ತಾಲೂಕು ಸಮಿತಿ ಸದಸ್ಯರಿಗೆ ಪ್ರತಿ ಸಭೆಗೆ 1 ಸಾವಿರ ರೂ ಸಭಾ ಭತ್ಯೆ ನೀಡಲಾಗುತ್ತದೆ. ಬಿಬಿಎಂಪಿ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಿಗೆ ಮಾಸಿಕ 40 ಸಾವಿರ ರೂ ಗೌರವ ಧನ ನೀಡಲಾಗುತ್ತದೆ. ಸದಸ್ಯರಿಗೆ ಪ್ರತಿ ಸಭೆಗೆ ಸಭಾ ಭತ್ಯೆಯಾಗಿ 1200 ರೂ ಪಡೆಯಲಿದ್ದಾರೆ.