ಹುಬ್ಬಳ್ಳಿ; ಕಳೆದಹತ್ತು ವರ್ಷಗಳಿಂದ ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ಕೋಗು ಕೇಳಿ ಬರುತ್ತಿದೆ. ಆದರೆ ಉತ್ತರ ಕರ್ನಾಟಕದ ಭಾಗ ಎಂಬದಕ್ಕೆ ನಿಲಕ್ಷಕ್ಕೆ ಒಳಗಾಗಿದೆ. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ರಾಜ್ಯದಲ್ಲಿ 2ನೇ ಬೃಹತ್ ಮಹಾನಗರ ಪಾಲಿಕೆ. ಧಾರವಾಡ ಪ್ರತ್ಯೇಕ ಪಾಲಿಕೆಗೆ ಬೇಕಾದ ಎಲ್ಲ ತರಹದ ರೂಪು-ರೇಷೆ ಸಿದ್ಧಪಡಿಸಿ ಹಲವು ಬಾರಿ ಆಗ್ರಹಿಸಲಾಗಿದ್ದು ಸದನದಲ್ಲಿ ಧ್ವನಿ ಎತ್ತಿದರೂ ಸರ್ಕಾರ ಸ್ಪಂದಿಸದಿರುವುದು ಖೇದಕರ ಎಂದು ವಿಧಾನಸಭೆ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ ತಿಳಿಸಿದ್ದಾರೆ.
ಖಾಸಗಿ ಬಸ್ ಡಿಕ್ಕಿ ಹೊಡೆದು ಇಬ್ಬರು ದುರ್ಮರಣ: ಕಲ್ಲು ತೂರಿ ಜನರ ಆಕ್ರೋಶ!
ಈ ಕುರಿತು ಮಾಹಿತಿ ನೀಡಿರುವ ಅವರು, ದಾವಣಗೆರೆ ಮಹಾನಗರ ಪಾಲಿಕೆ ಹಾಗೂ ತುಮಕೂರು ಮಹಾನಗರ ಪಾಲಿಕೆಯ ಒಟ್ಟು ವಾರ್ಷಿಕ ಉತ್ಪನ್ನ 25 ಕೋಟಿ ರೂ. ಮಾತ್ರ ಇದೆ. ಆದರೆ ಧಾರವಾಡದ ವಾರ್ಷಿಕ 30 ಕೋಟಿ ರೂ.ಗಿಂತ ಹೆಚ್ಚಿದೆ. ವಸತಿ, ಕೈಗಾರಿಕೆ, ಶಿಕ್ಷಣ ಹಾಗೂ ಎಲ್ಲ ರೀತಿಯ ಬೆಳವಣಿಗೆ, ಜನಸಂಖ್ಯೆ ಹಾಗೂ ಕ್ಷೇತ್ರವಾರು ಸಹ ಹೆಚ್ಚಿಗೆ ಇದೆ. ಇವೆಲ್ಲವನ್ನು ಪರಿಗಣಿಸಿದಾಗಲೂ ಸರ್ಕಾರ ಮೀನಮೇಷ ಮಾಡುತ್ತಿರುವುದು ನೋವಿನ ಸಂಗತಿ.
ಕಲ್ಯಾಣ ಕರ್ನಾಟಕ ಭಾಗದ ಬೀದರ ಹಾಗೂ ರಾಯಚೂರಿಗೆ ಪ್ರತ್ಯೇಕ ಮಹಾನಗರ ಪಾಲಿಕೆ ನೀಡಲಾಗಿದೆ. ಆದರೆ ಉತ್ತರ ಕರ್ನಾಟಕ ಭಾಗದ ಧಾರವಾಡಕ್ಕೆ ನೀಡುತ್ತಿಲ್ಲ. ಒಂದು ಕಣ್ಣಿಗೆ ಸುಣ್ಣ ಇನ್ನೊಂದು ಕಣ್ಣಿಗೆ ಬೆಣ್ಣೆ ಹಚ್ಚುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ಮೇಲಾಗಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸ್ಥಳಿಯ ಕಾಂಗ್ರೆಸ್ ಶಾಸಕರು ಇದರ ಬಗ್ಗೆ ಗಮನ ಹರಿಸುತ್ತಿಲ್ಲ. ಈ ಧೋರಣೆ ನಿರಂತವಾಗಿದ್ದರೆ ಮುಂಬರುವ ದಿನಗಳಲ್ಲಿ ಧಾರವಾಡದಲ್ಲಿ ಬೃಹತ್ ಮಟ್ಟದಲ್ಲಿ ಹೋರಾಟ ನಡೆಸುವುದು ನಿಶ್ಚಿತ ಎಂದು ಅರವಿಂದ ಬೆಲ್ಲದ ತಿಳಿಸಿದ್ದಾರೆ.