ಬೆಂಗಳೂರು: ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ದಿವಂಗತ ಮೈಸೂರು ಅನಂತಸ್ವಾಮಿ ಸಂಯೋಜಿಸಿದ್ದ ಧಾಟಿಯಲ್ಲಿ 2 ನಿಮಿಷ 30 ಸೆಕೆಂಡ್ಗಳ ಕಾಲ ನಾಡಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಅಲ್ಲದೆ, ಕರ್ನಾಟಕ ಶಿಕ್ಷಣ ಕಾಯಿದೆಯಡಿ ನಾಡಗೀತೆ ಕಡ್ಡಾಯಗೊಳಿಸುವ ಅಧಿಕಾರ ರಾಜ್ಯ ಸರಕಾರಕ್ಕಿದೆ ಎಂದು ಆದೇಶಿಸಿದೆ.
ಸರಕಾರ ನಾಡಗೀತೆ ಕಡ್ಡಾಯಗೊಳಿಸಿ 2022ರ ಸೆ.25ರಂದು ಹೊರಡಿಸಿದ್ದ ಆದೇಶ ರದ್ದು ಕೋರಿ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ ವಜಾಗೊಳಿಸಿದೆ. ಪ್ರಕರಣ ಸಂಬಂಧ ಸುದೀರ್ಘ ವಿಚಾರಣೆ ನಡೆಸಿ ಕಾಯ್ದಿರಿಸಿದ ತೀರ್ಪನ್ನು ಬುಧವಾರ ಪ್ರಕಟಿಸಿದೆ.
Narayana Murthy: ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ..! ಹೇಗೆ ಗೊತ್ತಾ?
ತೀರ್ಪು ಪ್ರಕಟಿಸುವ ವೇಳೆ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್, ”ಈ ಪ್ರಕರಣದ ವಿಚಾರವಾಗಿ ನಾನು ವಿವಿಧ ರಾಜ್ಯಗಳ ನಾಡಗೀತೆ ಹಾಗೂ ರಾಷ್ಟ್ರಗೀತೆ ಕುರಿತು ಅಧ್ಯಯನ ಮಾಡಿದ್ದೇನೆ. ಒಂದೊಂದು ಭಾಗದಲ್ಲಿ ಒಂದೊಂದು ರೀತಿಯ ರಾಷ್ಟ್ರಗೀತೆ ಹೇಳುವ ಕಾನೂನಿದೆ. ಜಪಾನ್ನಲ್ಲಿ ಬಾಯಿಮುಚ್ಚಿ ರಾಷ್ಟ್ರಗೀತೆ ಹೇಳುವಂತೆ ಕಾನೂನು ರೂಪಿಸಲಾಗಿದೆ. ಸುಪ್ರೀಂ ಕೋರ್ಟ್ 1986ರ,
ಲ್ಲಿ ಬಿಜೋ ಇಮ್ಯಾನುಯಲ್ ಮತ್ತು ಓಶ್ರ್ ವಿರುದ್ಧ ಕೇರಳ ರಾಜ್ಯ ಪ್ರಕರಣದ ಕುರಿತಾಗಿ ತನ್ನ ಆದೇಶದಲ್ಲಿ ರಾಷ್ಟ್ರಗೀತೆ ಹಾಡಬೇಕೆಂದಿಲ್ಲ, ಎದ್ದು ನಿಂತು ಗೌರವ ಸೂಚಿಸಿದರೆ ಸಾಕು. ಆದರೆ, ಅಗೌರವ ತೋರುವಂತಿಲ್ಲವೆಂದು ಹೇಳಿದೆ. ಅದರ ಅನುಸಾರ ಗಾಯನದ ಹಕ್ಕು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಸಾರುತ್ತದೆ, ಅದು ಮೌನವನ್ನು ಒಳಗೊಂಡಿದೆ,” ಎಂದರು. ”ಬಯಸಿದಂತೆ ನಾಡಗೀತೆ ಹೇಳುವ ಅಧಿಕಾರ ಎಲ್ಲರಿಗೂ ಇದೆ. ಬೇಕಿದ್ದರೆ ಮರದ ರೆಂಬೆಯ ಮೇಲೆ ಕುಳಿತು ಹೇಳಿ, ಆದರೆ, ರೆಂಬೆ ಗಟ್ಟಿಯಾಗಿದೆಯೇ ಎಂದು ಪರಿಶೀಲಿಸಿ,” ಎಂದು ಅವರು ಹಾಸ್ಯ ಚಟಾಕಿ ಹಾರಿಸಿದರು.