ಬೆಂಗಳೂರು:- ಇಂಡಿಯನ್ ಪ್ರೀಮಿಯರ್ ಲೀಗ್ 2024 ರ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಹೀಗಾಗಿ ಐಪಿಎಲ್ ಪಂದ್ಯವಾಳಿಯಲ್ಲಿ ನೀರಿನ ಪೂರೈಕೆಗೆ ಜಲಮಂಡಳಿಯಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ.
ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಸಂಸ್ಕರಿಸಿದ ನೀರು ಒದಗಿಸಲು ಜಲಮಂಡಳಿ ಒಪ್ಪಿಗೆ ನೀಡಿದ್ದು, ಐಪಿಎಲ್ ಮ್ಯಾಚ್ ಸಂಧರ್ಭದಲ್ಲಿ ನೀರು ಪೋಲಾಗುತ್ತೆ ಅನ್ನೋ ಆರೋಪ ಕೇಳಿ ಬಂದಿತ್ತು. ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ನೀರು ಒದಗಿಸಲು ಕೋರಿ KSCA
ಆಡಳಿತ ಮಂಡಳಿಯಿಂದ ಮನವಿ ಮಾಡಲಾಗಿದೆ. ಜಲಮಂಡಳಿ ಅಧ್ಯಕ್ಷ ಡಾ.ವಿ. ರಾಮ್ ಪ್ರಸಾತ್ ಮನೋಹರ್ ಇಂದು ಭೇಟಿ ಮಾಡಿ ಮನವಿ ಸಲ್ಲಿಕೆ ಮಾಡಿದ್ದರು.
ಪಂದ್ಯಾವಳಿಗಳ ಸಂದರ್ಭದಲ್ಲಿ ಪ್ರತಿನಿತ್ಯ ಸುಮಾರು 75,000 ಲೀಟರ್ಗಳಷ್ಟು ನೀರಿನ ಅವಶ್ಯಕತೆ ಇದೆ. ಇದಕ್ಕಾಗಿ ಕಬ್ಬನ್ ಪಾರ್ಕ್ ತ್ಯಾಜ್ಯ ನೀರು ಸಂಸ್ಕರಣ ಘಟಕದಿಂದ ಅಗತ್ಯ ನೀರನ್ನು ದೊರಕಿಸಿ ಕೊಡುವಂತೆ KSCA ಮನವಿ ಮಾಡಿದ್ದರು. ಸದ್ಯ ಸಂಸ್ಕರಿಸಿದ ನೀರನ್ನ ಪೂರೈಕೆ ಮಾಡಲು ಜಲಮಂಡಳಿಯಿಂದ ಒಪ್ಪಿಗೆ ನೀಡಲಾಗಿದೆ.