ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಸರ್ಕಾರ ಚಾಲನೆ ನೀಡಿದ್ದು, ಆ ಮೂಲಕ ಮಹಿಳಾ ಸಬಲೀಕರಣಕ್ಕೆ ಮೊದಲ ಆದ್ಯತೆಯನ್ನು ನೀಡಿದೆ. ಗೃಹಲಕ್ಷ್ಮಿ ಯೋಜನೆಯ ಮೂಲಕ ರಾಜ್ಯದ ಮಹಿಳೆಯರ ಆರ್ಥಿಕ ಪರಿಸ್ಥಿತಿಯನ್ನು ಉತ್ತಮಗೊಳಿಸುವ ಉದ್ದೇಶವನ್ನು ಹೊಂದಿದ್ದು, ಈಗಾಗಲೇ ಬ್ಯಾಂಕ್ ಖಾತೆಗಳಲ್ಲಿ ಹಣವನ್ನು ಪಡೆದುಕೊಂಡಿರುವ ಮಹಿಳೆಯರು ಸಂತಸ ವ್ಯಕ್ತಪಡಿಸಿದ್ದಾರೆ. ಆದ್ರೆ 2 ತಿಂಗಳಿನಿಂದ ಗೃಹಲಕ್ಷ್ಮಿ ಹಣ ಬರ್ತಿಲ್ಲ , ಹಣ ಬರದೇ ಸಾಕಷ್ಟು ತೊಂದರೆಯಾಗಿದೆ.
ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಗೌರವ ಸಿಗುತ್ತಿಲ್ಲ ಎಂದು ಮಹಿಳೆಯರು ಆಕ್ರೋಶ ಹೊರಹಾಕಿದ್ದಾರೆ. ಸರ್ಕಾರವು ಗೃಹಲಕ್ಷ್ಮಿ ಯೋಜನೆಯ ಮುಖಾಂತರ ಮಹಿಳೆಯರಿಗೆ ಪ್ರತಿ ತಿಂಗಳು 2000 ಸಾವಿರ ಹಣವನ್ನು ನೀಡುತ್ತಿತ್ತು. ಈಗಾಗಲೇ 10 ಕಂತಿನ ಹಣವನ್ನು ಗೃಹಲಕ್ಷ್ಮಿಯರಿಗೆ ನೀಡಿದೆ, ಆದರೆ 11ನೇ ಕಂತಿನ ಹಣವನ್ನು ಇನ್ನು ಕೂಡ ನೀಡಿಲ್ಲ.. ಇದುವರೆಗೂ ದುಡ್ಡು ಬಾರದೇ ಇದ್ದ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಹಂತ ಹಂತವಾಗಿ ಹಣ ಹಾಕುವ ಪ್ರಕ್ರಿಯೆ ನಡೆಯುತ್ತಿದೆ.ಆದರೆ ನಮಗೆ 2 ತಿಂಗಳಿನಿಂದ ಹಣ ಬರ್ತಿಲ್ಲ ಎಂದು ಮಹಿಳೆಯರು ಆರೋಪಿಸಿದ್ದಾರೆ.
![Demo](https://ainlivenews.com/wp-content/uploads/2023/12/spoorthi-1.jpg)
Health Tips: ಪಾಲಕ್ ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ.! ತೂಕ ಇಳಿಸಲು ಕುಡಿಯಲೇಬೇಕು ಈ ಜ್ಯೂಸ್
ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಬರದೆ ಇರಲು ಸರ್ಕಾರದ ಖಜಾನೆ ಖಾಲಿಯಾಗಿದೆ, ಈ ಒಂದು ಸಮಸ್ಯೆಯಿಂದಾಗಿ ಸರ್ಕಾರವು ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣವನ್ನು ಮಹಿಳೆಯರ ಖಾತೆಗೆ ಜಮಾ ಮಾಡಲು ವಿಳಂಬವನ್ನು ತೆಗೆದುಕೊಂಡಿದೆ. ಹಾಗಾಗಿ ಸರ್ಕಾರವು ಪೆಟ್ರೋಲ್ ಮತ್ತು ಹಾಲಿನ ಹಣವನ್ನು ಹೆಚ್ಚು ಮಾಡಿದೆ ಪೆಟ್ರೋಲ್ ಬೆಲೆಯಲ್ಲಿ ಮೂರು ರೂಪಾಯಿ ಹಣವನ್ನು ಅಧಿಕಮಾಡಲಾಗಿದೆ ಮತ್ತು ಹಾಲಿನ ಬೆಲೆಯನ್ನು 2.10 ಪೈಸೆ ಮಾಡಲಾಗಿದೆ. ಇದನ್ನೆಲ್ಲ ಗಮನಿಸಿದ ನೆಟ್ಟಿಗರು ಸರ್ಕಾರದ ಖಜನೆ ಖಾಲಿಯಾಗಿದೆ ಎಂದು ಕಿಡಿಕಾರುತ್ತಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)