ಹುಬ್ಬಳ್ಳಿ:- ಸಿದ್ದರಾಮಯ್ಯ ಪರ ಜಿಟಿಡಿ ಹೇಳಿಕೆ, ಅದು ಅವರ ಪಕ್ಷಕ್ಕೆ ಬಿಟ್ಟ ಆಂತರಿಕ ವಿಚಾರ ಎಂದು ಬಿವೈ ವಿಜಯೇಂದ್ರ ಹೇಳಿದ್ದಾರೆ.
Hubballi: ದತ್ತಾತ್ರೇಯ ದೇವರ ಮೂರ್ತಿಯನ್ನ ಭಗ್ನಗೊಳಿಸಿದ ಕಿಡಿಗೇಡಿಗಳು!
ಜಿಟಿಡಿ ಹೇಳಿಕೆ ಜೆಡಿಎಸ್ ಪಕ್ಷದ ಆಂತರೀಕ ವಿಚಾರವಾಗಿದೆ. ಅದನ್ನು ಸರಿ ಮಾಡಿಕೊಳ್ಳುವ ಶಕ್ತಿ ಕುಮಾರಸ್ವಾಮಿಗಿದೆ. ಹೀಗಾಗಿ ನಾನು ಅದರ ಬಗ್ಗೆ ಟೀಕೆ ಮಾಡಲ್ಲ. ಆದರೆ, ಅಕ್ರಮದ ವಿರುದ್ಧ ಹೋರಾಟ ವಿಪಕ್ಷಗಳ ಜವಾಬ್ದಾರಿಯಾಗಿದೆ. ಜಿಟಿಡಿ ಕೇಳಿ ಮೈಸೂರು ಚಲೋ ಪಾದಯಾತ್ರೆ ಮಾಡಿರಲಿಲ್ಲ ಎಂದರು.
ಇದೇ ವೇಳೆ ಭ್ರಷ್ಟ ಸಿಎಂ, ಸರ್ಕಾರದ ವಿರುದ್ಧ ಹೋರಾಟವನ್ನ ಮಾಡಿದ್ದೇವೆ. ಮುಡಾ ಪ್ರಕರಣ ಕೇವಲ 14 ಸೈಟ್ ವಿಚಾರದ್ದಲ್ಲ. ಮುಡಾ ಸೈಟ್ ಕೇಸ್ನಲ್ಲಿ ಸಾವಿರಾರು ಕೋಟಿ ಲೂಟಿ ಆಗಿದೆ. ಈ ಅಕ್ರಮದ ಬಗ್ಗೆ ಅಧಿವೇಶನದಲ್ಲಿ ಚರ್ಚೆಯಾಯಿತು. ಆಗ ಹಗರಣವೇ ಆಗಿಲ್ಲ, ಚರ್ಚೆ ಅವಶ್ಯಕತೆಯಿಲ್ಲ ಎಂದರು. ಮಂತ್ರಿಮಂಡಲ ಕೂಡ ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳಿದರು. ಆದರೆ, ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ತನಿಖೆಗೆ ಮುಂದಾದರು. ಈಗ ಅವರ ಪರಿಸ್ಥಿತಿ ಎಲ್ಲಿಗೆ ಬಂತು ಎಂದರು.
ಅಷ್ಟೇ ಅಲ್ಲ, ಸಿಎಂ ಸಿದ್ದರಾಮಯ್ಯನವರು ನಾನು ತಪ್ಪೇ ಮಾಡಿಲ್ಲ. ಸೈಟ್ ವಾಪಸ್ ಕೊಟ್ಟರೆ 64 ಕೋಟಿ ಹಣ ಕೊಡಿ ಅಂದರು. ಆದ್ರೆ, ಇಂದು ಸಲೀಸಾಗಿ 14 ಸೈಟ್ ವಾಪಸ್ ಕೊಟ್ಟಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಈಗ 14 ಸೈಟ್ ಅವರ ಬುಡಕ್ಕೆ ಬಂದಿದೆ ಎಂದು ಜ್ಞಾನೋದಯವಾಗಿದೆ. ಅದಕ್ಕಾಗಿ 14 ನಿವೇಶನಗಳನ್ನ ಮುಡಾಗೆ ಹಿಂದಿರುಗಿಸಿದ್ದಾರೆ ಎಂದು ಸಿದ್ದರಾಮಯ್ಯ ಅವರ ವಿರುದ್ದ ಕಿಡಿಕಾರಿದರು.