ಹುಬ್ಬಳ್ಳಿ: ನೇಹಾ ತಂದೆ ನಿರಂಜನಯ್ಯ ಹಿರೇಮಠ್ ಅವರಿಗೆ ಪೊಲೀಸ್ ಭದ್ರತೆ ನೀಡಿದಲಾಗಿದೆ. ಹೌದು ಹುಬ್ಬಳ್ಳಿಯಲ್ಲಿರುವ ಅವರ ಮನೆಗೆ ಅಪರಿಚಿತ ವ್ಯಕ್ತಿಗಳು ಆಗಮಿಸುತ್ತಿದ್ದಾರೆ. ಕೆಲ ಅನುಮಾನಾಸ್ಪದ ಚಟುವಟಿಕೆಗಳು ನಡೆಯುತ್ತಿವೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆ ನೇಹಾ ತಂದೆ ನಿರಂಜನಯ್ಯ ಹಿರೇಮಠ್ ಅವರಿಗೆ ಪೊಲೀಸ್ ಭದ್ರತೆ ನೀಡಿದಲಾಗಿದೆ.
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಮಗಳ ಕೊಲೆ ಪ್ರಕಣಕ್ಕೆ ಸಂಬಂಧಿಸಿ ತನಗೆ ಕೆಲವರಿಂದ ಜೀವ ಬೆದರಿಕೆಯಿದೆ ಎಂದು ನಿರಂಜನಯ್ಯ ಹೇಳಿದ್ದರು.ಅಲ್ಲದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿಯೂ ಬೆದರಿಕೆ ಕುರಿತು ಪ್ರಸ್ತಾವಿಸಿದ್ದರು.
Post Office Jobs: ಅಂಚೆ ಇಲಾಖೆಯಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನ.! 10th ಪಾಸಾಗಿದ್ರೆ ಸಾಕು – ಇಂದೇ ಅರ್ಜಿ ಸಲ್ಲಿಸಿ
ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶುಕ್ರವಾರ ಬೆಳಿಗ್ಗೆಯಿಂದ ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸ್ ಘಟದ ವತಿಯಿಂದ ನಿರಂಜನಯ್ಯ ಅವರಿಗೆ ಶಸ್ತ್ರಸಜ್ಜಿತ ಒಬ್ಬ ಅಂಗರಕ್ಷಕರನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ. ನೇಹ ಹತ್ಯೆ ಬಳಿಕ ಸಾಕಷ್ಟು ಮಂದಿ ಕುಟುಂಬಕ್ಕೆ ಸಾಂತ್ವನ ಹೇಳಲು ಬರುತ್ತಿದ್ದಾರೆ. ಇದೇ ನೆಪದಲ್ಲಿ ಕೆಲವು ಅನುಮಾನಾಸ್ಪದ ವ್ಯಕ್ತಿಗಳು ಮನೆಗೆ ಬಂದಿದ್ದರು.
ಮಗಳು ಮಲಗುವ ಬೆಡ್ರೂಮ್ ವಿಡಿಯೋ ಸಹ ಮಾಡಿಕೊಂಡಿದ್ದಾರೆ. ನಮ್ಮ ಕುಟುಂಬದವರ ಜೀವಕ್ಕೂ ಅಪಾಯದ ಲಕ್ಷಣವಿದೆ. ಈ ಕುರಿತು ತನಿಖೆಯಾಗಬೇಕು ಎಂದು ನೇಹಾ ತಂದೆ ನಿರಂಜನಯ್ಯ ಆಗ್ರಹಿಸಿದ್ದರು. ಹೀಗಾಗಿಯೇ ಅವರಿಗೆ ಹಾಗೂ ಅವರ ನಿವಾಸಕ್ಕೆ ಭದ್ರತಾ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.