ಚಿಕ್ಕಮಗಳೂರು: ಸರ್ಕಾರಿ ಬಸ್ಸಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅರ್ಧ ಕೆ.ಜಿ ಚಿನ್ನ ಸೀಜ್ ಮಾಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಮಾಗಡಿ ಚೆಕ್ ಪೋಸ್ಟ್ ನಲ್ಲಿ ನಡೆದಿದೆ. ರಾಜ್ಯಾದ್ಯಂತ ನೀತಿ ಸಂಹಿತೆಯೂ ಜಾರಿಯಾಗಿ ಮುಖ್ಯರಸ್ತೆಗಳಲ್ಲಿ ಬ್ಯಾರಿಕೇಡ್ ಕಟ್ಟೆಚ್ಚರ ವಹಿಸಿರುವ ಪೊಲೀಸರು ಸರ್ಕಾರಿ ವಾಹನಗಳು ಸೇರಿದಂತೆ ಎಲ್ಲ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದಾರೆ.
ರಾತ್ರಿ ಅನ್ನ ಉಳಿದರೆ ಅದನ್ನು ಬಿಸಾಡಬೇಡಿ! ಅದರ ಸೇವನೆಯಿಂದಾಗುವ ಪ್ರಯೋಜನ ತಿಳಿದ್ರೆ ಶಾಕ್ ಆಗ್ತಿರಾ.!
ಬೆಂಗಳೂರಿನಿಂದ ಚಿಕ್ಕಮಗಳೂರಿನತ್ತ ಬರುತ್ತಿದ್ದ ಸರ್ಕಾರಿ ಬಸ್ ಚಿಕ್ಕಮಗಳೂರಿನ ಮಾಗಡಿ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ನಡೆಸಿದಾಗ ದಾಖಲೆ ಇಲ್ಲದೆ ಅಕ್ರಮವಾಗಿ ಲಕ್ಷಾಂತರ ರೂಪಾಯಿ ಚಿನ್ನ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಕಂಡಕ್ಟರ್, ಡ್ರೈವರ್ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.