ಮಂಡ್ಯ: ಲೋಕ ಸಮರದ ಹೊಸ್ತಿಲಲ್ಲೇ ಬಿಡುಗಡೆಯಾಗಿರುವ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ ಹೊಸ ಬಾಂಬ್ ಸಿಡಿಸಿದ್ದಾರೆ. ಹೌದು ಪೆನ್ಡ್ರೈವ್ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಅವರ ಕೈವಾಡ ಎಂಬ ಆರೋಪದ ವಿಚಾರವಾಗಿ ಮಂಡ್ಯದಲ್ಲಿ ಮಾತನಾಡಿದ ಅವರು, ‘ಡಿಕೆಶಿ ಮಾಡ್ಸಿದ್ದಾರೆ ಎನ್ನುವುದರ ಕುರಿತು ದಾಖಲೆ ಕೊಡಿ ಎಂದು ವಾಗ್ದಾಳಿ ನಡೆಸಿದ್ದಾರೆ.
ಅವರ ಹತ್ತಿರ ಸಾವಿರಾರು ಜನ ಬರ್ತಾರೆ, ಶಿವಕುಮಾರ್ ಭೇಟಿ ಮಾಡಲು ದೇವರಾಜೇಗೌಡ, ಬಿಜೆಪಿಯ ಮಾಜಿ ಶಾಸಕ ಇವರೇ ಯಾಕೆ ಷಡ್ಯಂತ್ರ ಹೂಡಿರಬಾರದು? ಎಂದು ಪ್ರಶ್ನಿಸಿದ್ದಾರೆ. ಪ್ರಜ್ವಲ್ ರೇವಣ್ಣ ಸ್ಟೇ ತಂದಾಗ ಇದೇ ದೇವರಾಜೇಗೌಡ ಹಾಸನದಲ್ಲಿ ನಿನ್ನ ಸ್ಟೇ ವೆಕಾಟ್ ಇದೆ, ಎಲ್ಲವನ್ನ ಬಿಡ್ತಿನಿ ಎಂದು ಹೇಳಿದ್ದಾರೆ.
Hair Care: ಕೂದಲು ದಟ್ಟವಾಗಿರಲು ವಾರಕ್ಕೆ ಎಷ್ಟು ಬಾರಿ ಎಣ್ಣೆ ಹಚ್ಚಬೇಕು ಗೊತ್ತಾ?
ಒಂದು ತಿಂಗಳ ದೇವರಾಜೇಗೌಡ ಸ್ಟೇಟ್ಮೇಂಟ್ ನೋಡಿ. ಇದರಲ್ಲಿ ಕೈವಾಡವಿರುವ ಮಾಜಿ ಶಾಸಕನೇ ಕೋಟ್ಯಾಂತರ ರೂ. ಹೂಡಿಕೆ ಮಾಡಿ ಪೆನ್ ಡ್ರೈ ಹಂಚಿದ್ದಾರೆ. ರೇವಣ್ಣ ಕುಟುಂಬದ ಜೊತೆ ರಾಜಕೀಯ ವಿರೋಧಿ ಇದ್ದಾರೆ, ಅವರೇ ಷಡ್ಯಂತ್ರ ಮಾಡಿರೋದು. ಇವಾಗ ಡಿಕೆ ಶಿವಕುಮಾರ್ ಮೇಲೆ ಹೇಳುತ್ತಿದ್ದಾರೆ ಎಂದು ಕಿಡಿಕಾರಿದರು.