ಹುಬ್ಬಳ್ಳಿ: ನಟಿ ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೊನ್ನಪ್ಪ ಅವರು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ನಗರದಪ್ರಹ್ಲಾದ್ ಜೋಶಿಯವರ ಮನೆಗೆ ಭೇಟಿ ನೀಡಿ ದಂಪತಿ ಚರ್ಚೆ ಮಾಡಿದರು. ತಮ್ಮ ಮೇಲೆ ನಡೆದ ದೌರ್ಜನ್ಯದ ಕುರಿತು ವಿವರಿಸಿದ್ದು, ಎಲೆಕ್ಷನ್ ಮುಗಿದ ನಂತರ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದು,ನಿಮ್ಮ ಜೊತೆ ನಾವಿದ್ದೇವೆ ಎಂದು ಜೋಶಿ ದಂಪತಿಗೆ ಧೈರ್ಯ ಹೇಳಿದ್ದಾರೆ.ಇದೇ ವೇಳೆ ಮಾತನಾಡಿದ ಹರ್ಷಿಕಾ ಪೂಣಚ್ಚ, ನಾವು ನೇಹಾ ಹಿರೇಮಠ ಕುಟುಂಬಕ್ಕೆ ಸಾಂತ್ವನ ಹೇಳಲು ಬಂದಿದ್ದೇವೆ.
ನಮಗೆ ಆದ ತೊಂದರೆಗೆ ಪ್ರಹ್ಲಾದ್ ಜೋಶಿಯವರು ಸ್ಪಂದಿಸಿದ್ದರು. ಅವರಿಗೆ ಧನ್ಯವಾದ ತಿಳಿಸಲು ಮನೆಗೆ ಬಂದಿದ್ದೇವೆ. ನಮ್ಮ ಕುಟುಂಬ ಯಾರ ತಂಟೆಗೂ ಹೋಗದೆ ನಮ್ಮ ಪಾಡಿಗೆ ನಾವಿದ್ದೇವೆ. ರೆಸ್ಟೋರೆಂಟ್ಗೆ ಹೋದಾಗ ಕೆಲವರು ತೊಂದರೆ ಮಾಡಿದ್ದಾರೆ. ಕನ್ನಡ ಮಾತಾಡಿದ್ದಕ್ಕೆ ನಮ್ಮ ಜೊತೆ ಜಗಳ ತೆಗೆದಿದ್ದಾರೆ. ಸಾಕಷ್ಟು ಜನರು ಜಮಾಯಿಸಿ ದೌರ್ಜನ್ಯ ಮಾಡಿದ್ರು. ಕತ್ತಲ್ಲಿದ್ದ ಚೈನ್ ಕಿತ್ತುಕೊಳ್ಳಲು ಪ್ರಯತ್ನಿಸಿದ್ರು. ಸೆಲೆಬ್ರಿಟಿಗಳಿಗೆ ಹೀಗಾದರೆ ಜನಸಾಮಾನ್ಯರ ಸ್ಥಿತಿಯೇನು ಎಂದು ಪ್ರಶ್ನಿಸಿದರು.
ಜೋಶಿ ಅವರನ್ನ ಭೇಟಿ ಮಾಡಿ ಧೈರ್ಯ ಬಂದಿದೆ- ನಟ ಭುವನ್.. ಇದೇವೇಳೆ ಮಾತನಾಡಿದ ನಟ ಭುವನ ಮೇಲೆ ದೌರ್ಜನ್ಯ ಮಾಡಿದ ಪ್ರಕರಣದ ಹಿನ್ನೆಲೆಯಲ್ಲಿ, ಇಂದು ಜೋಶಿ ಸರ್ಗೆ ಭೇಟಿಯಾಗಿ ನಮಗಾದ ತೊಂದರೆ ಬಗ್ಗೆ ಹೇಳಿದ್ದೇವೆ. ಎಲೆಕ್ಷನ್ ಆದ ಮೇಲೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಜೋಶಿ ಸರ್ ಭೇಟಿಯಾಗಿ ಧೈರ್ಯ ಬಂದಿದೆ. ಬೆಂಗಳೂರು ಪೊಲೀಸರು ಸಮರ್ಪಕ ತನಿಖೆ ಮಾಡುತ್ತಿದ್ದಾರೆ.
ಆರೋಪಿಗಳನ್ನು ಗುರುತಿಸಿದ್ದು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆಂದು ಎಂದರು.ಕಾಂಗ್ರೆಸ್ ಮ್ಯಾನಿಫ್ಯಾಸ್ಟೋ ದೇಶವನ್ನು ಮಾವೋವಾದಿ ದೇಶ ಮಾಡಲು ಹೊರಟಿದೆ- ಪ್ರಹ್ಲಾದ್ ಜೋಶಿ.ರಾಹುಲ್ ಗಾಂಧಿ ಭಾಷಣ, ಕಾಂಗ್ರೆಸ್ ಮ್ಯಾನಿಫ್ಯಾಸ್ಟೋ ದೇಶವನ್ನು ಮಾವೋವಾದಿ ದೇಶ ಮಾಡಲು ಹೊರಟಿದೆ. ಜನರ ಬಳಿ ಎರಡು ಬೈಕ್, ಮನೆ ಇದ್ದರೆ ಒಂದು ಕಸಿದುಕೊಳ್ಳುತ್ತಾರೆ. ಕಾಂಗ್ರೆಸ್ ಪಾರ್ಟಿ ದೇಶಕ್ಕೆ ವೆಲ್ತ್ ಕ್ರಿಯೇಟ್ ಮಾಡುವವರ ವಿರುದ್ಧ ಹೊರಟಿದೆ ಎಂದು ಕಿಡಿಕಾರಿದರು. ಮಾವೋವಾದಿ ಮನಸ್ಥಿತಿ ಇಟ್ಟುಕೊಂಡು ಎಲ್ಲರನ್ನೂ ಟಾರ್ಗೆಟ್ ಮಾಡುತ್ತಿದ್ದಾರೆ. ಇನ್ನು ಫೇಲ್ ಆಗಿರುವ ಮಾವೋವಾದಿ ವಿಚಾರದ ಬಗ್ಗೆ ಜನರು ಎಚ್ಚರಿಕೆಯಿಂದ ಇರಬೇಕು. ಕಾಂಗ್ರೆಸ್ನವರು ತುಷ್ಟೀಕರಣದ ಪರಾಕಾಷ್ಟೆ ತಲುಪುತ್ತಿದ್ದಾರೆ ಎಂದು ಹರಿಯ್ದಾದರು.