ಹಾಸನ:- ಎಂದೂ ಹಾಸನ ಜನ ನನ್ನ ಕೈ ಬಿಡಲ್ಲ ಎಂದು ಹೆಚ್ ಡಿ ರೇವಣ್ಣ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ನಮಗೆ ಜಿಲ್ಲೆಯ ಜನ ಹಲವು ದಶಕಗಳಿಂದ ಆಶೀರ್ವಾದ ಮಾಡಿದ್ದಾರೆ. 25 ವರ್ಷ ಶಾಸಕನಾಗಿ ಕೆಲಸ ಮಾಡಿದ್ದೇನೆ. ಎಲ್ಲರೂ ನನಗೆ ಸಹಕಾರ ಕೊಟ್ಟಿದ್ದಾರೆ. ಈ ಕ್ಷೇತ್ರದ ಜನ ನನ್ನ ಕೈ ಬಿಡುವುದಿಲ್ಲ ಎಂದರು.
ನಮಗೆ ದಶಕಗಳಿಂದ ಜಿಲ್ಲೆಯ ಜನ ಆಶೀರ್ವಾದ ಮಾಡಿದ್ದು, ನನ್ನ ವಿರುದ್ಧದ ಕೇಸ್ಗಳು ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವುದರಿಂದ ಏನೂ ಮಾತನಾಡಲ್ಲ. ನ್ಯಾಯಾಲಯಕ್ಕೆ ಗೌರವ ಕೊಡುತ್ತೇನೆ. ಮುಂದೆ ಮಾತನಾಡುತ್ತೇನೆ. ನನಗೆ ನ್ಯಾಯಾಲಯದ ಮೇಲೆ ನಂಬಿಕೆ ಇದೆ. ನಮ್ಮ ಪ್ರಕರಣ ನ್ಯಾಯಾಲಯದಲ್ಲಿ ಇದೆ. ಆದ್ದರಿಂದ ನಾನು ಏನು ಮಾತನಾಡಲ್ಲ ಎಂದರು
ನಾನು ಬದುಕಿರುವವರೆಗೂ ನನ್ನನ್ನ ಜನ ಕೈ ಬಿಡೋದಿಲ್ಲ ಅನ್ನೋ ವಿಶ್ವಾಸ ಇದೆ. ನಾನು, ಕುಮಾರಸ್ವಾಮಿ ದೇವೇಗೌಡರು ಎಲ್ಲರೂ ಅವರ ಜೊತೆ ಇರುತ್ತೇವೆ. ಜಿಲ್ಲೆಯ ಜನ ದೇವೇಗೌಡರಿಗೆ 60 ವರ್ಷ ರಾಜಕೀಯವಾಗಿ ಬೆಂಬಲ ನೀಡಿದ್ದಾರೆ. ಈ ಜಿಲ್ಲೆಯ ಜನರ ಋಣ ನನ್ನ ಮೇಲಿದೆ. ಇದನ್ನು ಬಿಟ್ಟು ನಾನು ಏನನ್ನೂ ಹೇಳೋದಿಲ್ಲ ಎಂದು ಹೇಳಿದರು