ಲಕ್ನೋ: ಹತ್ರಾಸ್ ಕಾಲ್ತುಳಿತ ಪ್ರಕರಣದ ಪ್ರಮುಖ ಆರೋಪಿ ದೇವಪ್ರಕಾಶ್ ಮಧುಕರ್ನನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಶಂಕಿತ ಆರೋಪಿ ಸಂಜು ಯಾದವ್ನನ್ನು 14 ದಿನಗಳ ಕಾಲ ಜೈಲಿಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದಕ್ಕೂ ಮೊದಲು ಮಧುಕರ್ ಮತ್ತು ಇತರ ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆಯಲು ಪೊಲೀಸರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು ಎಂದು ಹತ್ರಾಸ್ ಪೊಲೀಸ್ ವರಿಷ್ಠಾಧಿಕಾರಿ ನಿಪುನ್ ಅಗರ್ವಾಲ್ ತಿಳಿಸಿದ್ದಾರೆ.
ದೇವಪ್ರಕಾಶ್ ಮಧುಕರ್ ಮತ್ತು ಸಂಜು ಯಾದವ್ ಅವರನ್ನು ಇಂದು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಇಬ್ಬರನ್ನೂ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಸಹಾಯಕ ಪ್ರಾಸಿಕ್ಯೂಷನ್ ಅಧಿಕಾರಿ ಉಮಾ ಶಂಕರ್ ಯಾದವ್ ಹೇಳಿದ್ದಾರೆ. ಕಾಲ್ತುಳಿತ ಪ್ರಕರಣದಲ್ಲಿ ಬಂಧಿತನಾಗಿರುವ ರಾಮಪ್ರಕಾಶ್ ಶಾಕ್ಯಾ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಎಪಿಒ ಹೇಳಿದ್ದಾರೆ. ಮಧುಕರ್ ಮತ್ತು ಯಾದವ್ನನ್ನು ನಂತರ ಬಂಧಿಸಲಾಗಿದ್ದು, ಕೆಲವು ಪೊಲೀಸ್ ವಿಚಾರಣೆಗಳು ಬಾಕಿ ಉಳಿದಿವೆ.
ಹತ್ರಾಸ್ ಪೊಲೀಸರ ವಿಶೇಷ ಕಾರ್ಯಾಚರಣೆ ತಂಡವು ಶುಕ್ರವಾರ ತಡರಾತ್ರಿ ದೆಹಲಿಯ ನಜಾಫ್ಗಢ ಪ್ರದೇಶದಿಂದ ಮಧುಕರ್ನನ್ನು ಬಂಧಿಸಿದೆ. ಶಾಕ್ಯಾ ಮತ್ತು ಯಾದವ್ ಅವರನ್ನು ಶನಿವಾರ ಹತ್ರಾಸ್ನಿಂದ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.