ಬೆಂಗಳೂರು: ರಾಜ್ಯದಲ್ಲಿ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ರಾಜ್ಯ ಸರಕಾರ ಹೈಕೋರ್ಟ್ಗೆ ತಿಳಿಸಿದೆ. ಎಚ್ಎಸ್ಆರ್ಪಿ ಜಾರಿಗೆ ತಡೆ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ – ಏಕಸದಸ್ಯ ನ್ಯಾಯಪೀಠದ ತೀರ್ಪು ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿಗಳು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾ ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ನಿಗದಿಯಾಗಿದ್ದವು.
ಬಸ್ ಪ್ರಯಾಣಕ್ಕೆ ಬೇಕಿಲ್ಲ ನಗದು: ಇನ್ಮುಂದೆ KSRTCಯಲ್ಲಿ ಗೂಗಲ್ ಪೇ, ಫೋನ್ ಪೇ ಮೂಲಕ ಪಾವತಿ!?
ಈ ವೇಳೆ ಹೆಚ್ಚುವರಿ ಅಡ್ವಕೇಟ್ ಜನರಲ್ ವಿಕ್ರಮ್ ಹುಯಿಲಗೋಳ ನ್ಯಾಯಪೀಠದ ಮುಂದೆ, ಎಚ್ಎಸ್ಆರ್ಪಿ ಅಳವಡಿಸಿಕೊಳ್ಳಲು ನಿಗದಿಪಡಿಸಲಾಗಿದ್ದ ಅವಧಿಯನ್ನು ಸೆ. 15ರವರೆಗೆ ರಾಜ್ಯ ಸರ್ಕಾರ ವಿಸ್ತರಿಸಿದೆ ಎಂದು ನ್ಯಾಯಪೀಠಕ್ಕೆ ಮಾಹಿತಿ ನೀಡಿದರು.