ಬೆಂಗಳೂರು:– ಸಾಲು ಸಾಲು ಹಬ್ಬಗಳ ಮಧ್ಯೆ ಮಹಿಳೆಯರಿಗೆ ರಾಜ್ಯ ಸರ್ಕಾರ ಗುಡ್ನ್ಯೂಸ್ ನೀಡಿದೆ.
ಮಗುವಿಗೆ ಎದೆಹಾಲು ನೀಡುವುದರಿಂದ ಸ್ತನ ಕ್ಯಾನ್ಸರ್ ಅಪಾಯ ತಪ್ಪಿಸಬಹುದಂತೆ!
ಹೌದು.. ವರಮಹಾಲಕ್ಷ್ಮೀ, ನಾಗರ ಪಂಚಮಿ, ಶ್ರೀ ಕೃಷ್ಣ ಜನ್ಮಾಷ್ಟಮಿ ಸೇರಿದಂತೆ ಸಾಲು ಸಾಲು ಹಬ್ಬಗಳು ಇರೋವಾಗ ವಿಶೇಷವಾಗಿ ಮಹಿಳೆಯರು ಒಂದಷ್ಟು ಅಗತ್ಯ ವಸ್ತುಗಳ ಖರೀದಿಗೆ ಮುಂದಾಗುತ್ತಾರೆ. ರಾಜ್ಯದ ಬಡ ಮತ್ತು ಮಧ್ಯಮ ವರ್ಗದ ಮಹಿಳೆಯರು ಗೃಹಲಕ್ಷ್ಮೀ ಯೋಜನೆ ಬಂದ ಬಳಿಕ ಅಗತ್ಯ ವಸ್ತುಗಳ ಖರೀದಿಗೆ ಸರ್ಕಾರದ ಹಣವನ್ನು ನೆಚ್ಚಿಕೊಂಡಿದ್ದರು. ಇದೀಗ ಹಬ್ಬದ ಸಮಯದಲ್ಲೇ 26.65 ಲಕ್ಷ ಅರ್ಹ ಫಲಾನುಭವಿಗಳಿಗೆ ಸರ್ಕಾರ ಗುಡ್ನ್ಯೂಸ್ ನೀಡಿದೆ.
ವರಮಹಾಲಕ್ಷ್ಮಿ ಹಬ್ಬಕ್ಕೆ ಮಹಿಳೆಯರಿಗೆ ಸಿಹಿ ಸುದ್ದಿ ನೀಡಲು ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದ್ದು, ಗೃಹಲಕ್ಷ್ಮಿ ಹಣಕ್ಕಾಗಿ ಕಾಯುತ್ತಿದ್ದ ಮಹಿಳೆಯರ ಮುಖದಲ್ಲಿ ಸಂತಸ ತರಲು ತೀರ್ಮಾನಿಸಿದೆ. ಅದರನ್ವಯ ಗೃಹಲಕ್ಷ್ಮಿ ಯೋಜನೆಯ ಜೂನ್ ತಿಂಗಳ ಹಣ ಬಿಡುಗಡೆ ಪ್ರಕ್ರಿಯೆಗೆ ಮುಂದಾಗಿದೆ.
ನಾಳೆಯಿಂದ 26.65 ಲಕ್ಷ ಅರ್ಹ ಫಲಾನುಭವಿ ಮಹಿಳೆಯರ ಖಾತೆಗೆ ಜೂನ್ ತಿಂಗಳ ಹಣ ಪಾವತಿ ಆಗಲಿದ್ದು, ಕಳೆದ ಎರಡು ತಿಂಗಳಿಂದ ಬಿಡುಗಡೆಯಾಗದ ಗೃಹಲಕ್ಷ್ಮಿ ಹಣ ಹಬ್ಬದ ಸಮಯದಲ್ಲೇ ನೀಡುತ್ತಿರುವುದು ಮಹಿಳೆಯರಿಗೆ ಸಂತಸ ತರಿಸಿದೆ.
ಆರ್ಥಿಕ ಇಲಾಖೆಯಿಂದ ಅನುದಾನ ಬಿಡುಗಡೆ ಆಗಿದ್ದು, ಸದ್ಯ ತಾಂತ್ರಿಕ ಸಮಸ್ಯೆ ಸರಿಪಡಿಸಿದ ಬೆನ್ನಲ್ಲೇ ನಾಳೆಯಿಂದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರ ಖಾತೆಗೆ ಜೂನ್ ತಿಂಗಳ ಹಣ ಹಾಕಲು ತಯಾರಿ ಮಾಡಲಾಗಿದೆ.
ಮೊದಲ ಹಂತದಲ್ಲಿ 533 ಕೋಟಿ ರೂಪಾಯಿ ಹಣದ ಪಾವತಿ ಪ್ರಕ್ರಿಯೆ ಆರಂಭವಾಗಲಿದ್ದು, ಮೊದಲ ಹಂತದಲ್ಲಿ ಬೆಳಗಾವಿ, ಕಲಬುರ್ಗಿ, ಬೀದರ್, ವಿಜಯಪುರ, ಬಳ್ಳಾರಿ, ರಾಯಚೂರು, ಗದಗ, ಬಾಗಲಕೋಟೆ, ಹಾವೇರಿ, ಕೊಪ್ಪಳ, ಯಾದಗಿರಿ, ಚಿತ್ರದುರ್ಗ, ಬೆಂಗಳೂರು ಗ್ರಾ, ಕೋಲಾರ ಜಿಲ್ಲೆಗಳಿಗೆ ಹಣ ಬಿಡುಗಡೆಯಾಗಲಿದೆ ಎಂದು ಮೂಲಗಳು ತಿಳಿಸಿವೆ.
ಕಳೆದ ಎರಡ್ಮೂರು ತಿಂಗಳುಗಳಿಂದ ಸರ್ಕಾರ ಮಹಿಳೆಯರ ಖಾತೆಗೆ ಹಣ ಹಾಕದೇ ಇರೋದು ಮಹಿಳೆಯರಿಗೆ ಬೇಸರ ತರಿಸಿತ್ತು. ಇದೀಗ ಸಾಲು ಸಾಲು ಹಬ್ಬಗಳ ಮಧ್ಯೆ ಮಹಿಳೆಯರಿಗೆ ರಾಜ್ಯ ಸರ್ಕಾರ ಗುಡ್ನ್ಯೂಸ್ ನೀಡಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವದ ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ತಿಂಗಳಿಗೆ 2000 ಹಣ ನೀಡುವ ಗೃಹಲಕ್ಷ್ಮೀ ಯೋಜನೆ ರಾಜ್ಯದ ಮಹಿಳೆಯರಿಗೆ ಖುಷಿ ತಂದಿತ್ತು.ಆದರೆ ಕಳೆದ ಎರಡ್ಮೂರು ತಿಂಗಳುಗಳಿಂದ ಸರ್ಕಾರ ಮಹಿಳೆಯರ ಖಾತೆಗೆ ಹಣ ಹಾಕದೇ ಇರೋದು ಮಹಿಳೆಯರಿಗೆ ಬೇಸರ ತರಿಸಿತ್ತು. ಇದೀಗ ಸಾಲು ಸಾಲು ಹಬ್ಬಗಳ ಮಧ್ಯೆ ಮಹಿಳೆಯರಿಗೆ ರಾಜ್ಯ ಸರ್ಕಾರ ಗುಡ್ನ್ಯೂಸ್ ನೀಡಿದೆ.