ಇತ್ತೀಚಿನ ದಿನಗಳಲ್ಲಿ ರಕ್ತದೊತ್ತಡ ಸಮಸ್ಯೆ ಎಲ್ಲರಲ್ಲೂ ಕಂಡುಬರುತ್ತಿದೆ. ಅಧಿಕ ರಕ್ತದೊತ್ತಡ ಸಮಸ್ಯೆ ಇರುವವರು ಯಾವ ಆಹಾರ ಸೇವಿಸಬೇಕು?
ಯಾವುದನ್ನು ಸೇವಿಸಬಾರದು ಎಂಬುದನ್ನು ತಿಳಿದುಕೊಳ್ಳಿ.
ಅಧಿಕ ರಕ್ತದೊತ್ತಡ ಸಮಸ್ಯೆ ಇರುವವರು ಅದನ್ನು ನಿಯಂತ್ರಣದಲ್ಲಿಡಲು ಅನೇಕ ವಿಧದ ಹಣ್ಣುಗಳು ಮತ್ತು ತರಕಾರಿಗಳನ್ನು ಸೇವಿಸಬೇಕು. ಹಾಗಾಗಿ ಅಧಿಕ ರಕ್ತದೊತ್ತಡ ನಿಯಂತ್ರಣದಲ್ಲಿಡಲು ಗೋಧಿ, ಹೆಸರು ಬೇಳೆ, ಮಸೂರ, ಟೊಮೆಟೊ, ಸೋರೆಕಾಯಿ, ಹುಣಸೆಹಣ್ಣು, ಹಾಗಲಕಾಯಿ, ಕುಂಬಳಕಾಯಿ, ಹಸಿರು ಸೊಪ್ಪುಗಳು, ತರಕಾರಿ, ಹಣ್ಣುಗಳನ್ನು ಸೇವಿಸಿ ಜೊತೆಗೆ ಜೀರಿಗೆಯನ್ನು ನಿಮ್ಮ ಆಹಾರದಲ್ಲಿ ಸೇರಿಸಿದರೆ ಉತ್ತಮ.
ಆದರೆ ಅಧಿಕ ರಕ್ತದೊತ್ತಡ ಸಮಸ್ಯೆ ಇರುವವರು ಆಹಾರದಲ್ಲಿ ಉಪ್ಪು, ಸಕ್ಕರೆ ಮತ್ತು ಅಧಿಕ ಕೊಬ್ಬಿನ ಆಹಾರಗಳನ್ನು ಸೇವಿಸಬಾರದು. ಮೊಟ್ಟೆ,ಬೆಣ್ಣೆ,ಎಣ್ಣೆಯುಕ್ತ ಆಹಾರ, ಮಸಾಲೆಯುಕ್ತ ಆಹಾರ, ಮಾಂಸ, ತುಪ್ಪ, ಕೇಕ್, ಪಿಜ್ಜಾ. ಪ್ಯಾಕೆಟ್ ಆಹಾರ, ಜಂಕ್ ಫುಡ್ ಇಂತಹ ಆಹಾರಗಳಿಂದ ದೂರವಿರಿ.