ತುಮಕೂರು:- ಜಿಲ್ಲೆಯ ಕುಣಿಗಲ್ ತಾಲೂಕಿನ ಹಂಗರಹಳ್ಳಿಯ ವಿದ್ಯಾ ಚೌಡೇಶ್ವರಿ ದೇವಿಗೆ ವಜ್ರ ಖಚಿತ ಕಿರೀಟವನ್ನು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಅರ್ಪಿಸಿದ್ದಾರೆ.
ಬಳಿಕ ಹೋಮದಲ್ಲಿ ಭಾಗಿಯಾದ ಬಳಿಕ ಮಾತನಾಡಿದ ಗೌಡ್ರು, ಶ್ರೀ ಬಾಲ ಮಂಜುನಾಥ ಶ್ರೀಗಳು ಶ್ರೀ ಕ್ಷೇತ್ರಕ್ಕೆ ಬರಲು ಆಹ್ವಾನ ನೀಡಿದ್ದರು. ವಿದ್ಯಾ ಚೌಡೇಶ್ವರಿಯ ಉತ್ತರಾಯಣ ಪುಣ್ಯಕಾಲ. ಅತ್ಯಂತ ವಿಶೇಷವಾಗಿ ಕಾರ್ಯಕ್ರಮ ಆಯೋಜನೆ ಮಾಡಿದ್ದಾರೆ. ವರ್ಧಂತಿ ಉತ್ಸವ ಮತ್ತು ಅಮ್ಮನವರ ಚಿಕ್ಕಮ್ಮ ಜಾತ್ರೆಯು ಶಾಸ್ತ್ರೋಕ್ತವಾಗಿ ನಡೆದಿದೆ. ನಾನು ಉಪವಾಸ ವ್ರತ ಕೈಗೊಂಡು ಶ್ರೀ ಚೌಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದ್ದೇನೆ ಎಂದು ಹೇಳಿದರು.
ನನ್ನ ಎರಡು ಮಂಡಿ ಚೆನ್ನಾಗಿಲ್ಲ, ಆದರೂ ಕೂಡ ದೀರ್ಘ ದಂಡ ನಮಸ್ಕಾರ ಮಾಡಿದ್ದೇನೆ. ಇಲ್ಲಿ ನಡೆದಂತಹ ಹೋಮ ಅತ್ಯಂತ ವಿಶೇಷವಾಗಿತ್ತು. ಶ್ರೀ ವಿದ್ಯಾ ಚೌಡೇಶ್ವರಿ ದೇವಿಗೆ ಒಂದು ಕಿರೀಟ ಧಾರಣೆ ಮಾಡಿಸಿದ್ದೇನೆ. ಶ್ರೀ ಚೌಡೇಶ್ವರಿ ದೇವಿಯ ಶಕ್ತಿಯಿಂದಾಗಿ ಮೂರು ಬಾರಿ ನಾನು ಪ್ರದಕ್ಷಿಣೆ ಹಾಕಿದ್ದೇನೆ ಎಂದರು.