ಬೆಂಗಳೂರು: ಹಾಲು ಉತ್ಪಾದಕರಿಗೆ ಬಾಕಿ ಉಳಿಸಿಕೊಂಡಿರುವ 700 ಕೋಟಿ ರೂಪಾಯಿ ಸಬ್ಸಿಡಿ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಅವರು ಸರ್ಕಾರವನ್ನು ಒತ್ತಾಯ ಮಾಡಿದ್ದಾರೆ. ಈ ಬಗ್ಗೆ ಎಕ್ಸ್ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು,
” ಬರದಿಂದ ಕಂಗೆಟ್ಟ ರೈತರ ಹಾಹಾಕಾರ ಒಂದೆಡೆಯಾದರೆ, ಹಾಲಿನ ಸಬ್ಸಿಡಿಯನ್ನೂ ಕೊಡದೇ ದೋಖಾ ಮಾಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ. ಹಾಲು ಉತ್ಪಾದಕರ ಸಬ್ಸಿಡಿ ಹಣ 700 ಕೋಟಿ ರೂ. ಬಾಕಿ ಉಳಿಸಿಕೊಂಡಿರುವ ಸರ್ಕಾರದ ಆತ್ಮಸಾಕ್ಷಿ ಸತ್ತು ಹೋಗಿದೆಯಾ? ಎಂದು ಖಾರವಾಗಿ ” ಪ್ರಶ್ನಿಸಿದ್ದಾರೆ.
ಉದ್ಯೋಗ ಆಕಾಂಕ್ಷಿಗಳೇ ಗಮನಿಸಿ.. BBMPಯಲ್ಲಿ 11,307 ಗ್ರೂಪ್ ಡಿ ಹುದ್ದೆಗಳು ಖಾಲಿ ಇದೆ..! ಇಂದೇ ಅರ್ಜಿ ಸಲ್ಲಿಸಿ
” ಕೃಷಿ ಅನುದಾನಕ್ಕೆ ಶೇ 32 ಕತ್ತರಿ ಹಾಕಿದ್ದಾಯಿತು. ಈಗ ಹೈನುಗಾರರ ಸಬ್ಸಿಡಿಗೂ ಪಂಗನಾಮ. ಒಂದು ಲೀಟರ್ ಹಾಲಿನ ಸಬ್ಸಿಡಿಯನ್ನು 7 ರೂ. ಹೆಚ್ಚಿಸುತ್ತೇವೆ ಎಂದು ಚುನಾವಣೆ ವೇಳೆ ಕಾಂಗ್ರೆಸ್ ಸುಳ್ಳು ಹೇಳಿದ್ದೇ ಹೇಳಿದ್ದು. ಹೆಚ್ಚಿಸುವ ಮಾತಿರಲಿ, ಇದ್ದ ಸಬ್ಸಿಡಿಯನ್ನೂ (ಲೀಟರ್ ಹಾಲಿಗೆ 5 ರೂ.) ಕೊಡದೇ 7 ತಿಂಗಳಿಂದ ಸತಾಯಿಸುತ್ತಿದೆ ಎಂದು ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದ್ದಾರೆ”.