ಬೆಂಗಳೂರು:- ಪ್ರಜ್ವಲ್ ರೇವಣ್ಣರ ಖಾಸಗಿ ವಿಡಿಯೋ ಲೀಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ ಡಿ ಕುಮಾರಸ್ವಾಮಿ ತುರ್ತು ಸುದ್ದಿಗೋಷ್ಠಿ ನಡೆಸಿದ್ದಾರೆ.
ಯಲಹಂಕ: ರಾಜಾನುಕುಂಟೆಯ ಖಾಸಗಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ತಪ್ಪಿದ ಅನಾಹುತ!
ವಕೀಲ ದೇವರಾಜೇಗೌಡ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಕೈವಾಡ ಇದೆ ಎಂದು ನೇರ ಆರೋಪ ಮಾಡಿದ್ದಾರೆ. ಜತೆಗೆ, ಪ್ರಕರಣದ ತನಿಖೆಗೆ ರಚಿಸಲಾಗಿರುವ ಎಸ್ಐಟಿ ಸಹ ಡಿಕೆ ಶಿವಕುಮಾರ್ ನಿಯಂತ್ರಣದಲ್ಲಿದೆ ಎಂದು ಆರೋಪಿಸಿದ್ದಾರೆ.
ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಹೆಚ್ಡಿ ಕುಮಾರಸ್ವಾಮಿ ಮಂಗಳವಾರ ತುರ್ತು ಸುದ್ದಿಗೋಷ್ಠಿ ಕರೆದಿದ್ದಾರೆ. ಬೆಂಗಳೂರಿನ ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಯುತ್ತಿದೆ. ಪ್ರಸ್ತುತ ರಾಜಕೀಯ ಮತ್ತು ವಿಡಿಯೋ ಪ್ರಕರಣ ಕುರಿತು ಸುದ್ದಿಗೋಷ್ಠಿಯಲ್ಲಿ ಕುಮಾರಸ್ವಾಮಿ ಪ್ರಸ್ತಾಪಿಸುತ್ತಿದ್ದಾರೆ.
ಈ ಮಧ್ಯೆ, ವಿಡಿಯೋ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಕೈವಾಡವಿದೆ ಎಂದು ಬಿಜೆಪಿಯ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಹ ಆರೋಪಿಸಿದ್ದಾರೆ. ಮತ್ತೊಂದೆಡೆ, ಪ್ರಜ್ವಲ್ ವಿಡಿಯೋ ಕೇಸ್ನಲ್ಲಿ ಡಿಸಿಎಂ ಡಿಕೆ ಶಿಕುಮಾರ್ ಕೈವಾಡವಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬೆಂಗಳೂರಿನ ಜೆಡಿಎಸ್ ಕಚೇರಿ ಆವರಣದಲ್ಲಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಡಿಸಿಎಂ ಡಿಕೆ ಶಿವಕುಮಾರ್ರನ್ನು ಬಂಧಿಸುವಂತೆ ಆಗ್ರಹಿಸಿದರು.