ನವದೆಹಲಿ:- ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಚೊಚ್ಚಲ ಗೆಲುವು ಸಾಧಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರದಲ್ಲಿ ಮೋದಿ ಸಂಪುಟದಲ್ಲಿ ಕ್ಯಾಬಿನೆಟ್ ಸಚಿವರಾಗಿದ್ದಾರೆ.
Karnataka Weather: ತೀವ್ರಗೊಂಡ ಮುಂಗಾರು.. ರಾಜ್ಯದ ಹಲವೆಡೆ ಬಿರುಸಿನ ಮಳೆ ಮುನ್ಸೂಚನೆ!
ಕೃಷಿ ಖಾತೆ ಮೇಲೆ ಕಣ್ಣಿಟ್ಟಿದ್ದ ಕುಮಾರಸ್ವಾಮಿ ಅವರಿಗೆ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಇಲಾಖೆ ಸಿಕ್ಕಿದ್ದು, ಮೊದಲ ಬಾರಿಗೆ ಇಲಾಖೆಯ ಅಧಿಕಾರಿಗಳ ಜತೆ HDK ಸಮಾಲೋಚನೆ ಮಾಡಿದ್ದಾರೆ. ಇಲಾಖೆಗಳ ಅಧಿಕಾರಿಗಳ ಜತೆ ನಿನ್ನೆ ಸಂಜೆ ದೇಹಲಿಯಲ್ಲಿರುವ ಕರ್ನಾಟಕ ಭವನದಲ್ಲಿ ಚರ್ಚೆ ನಡೆಸಿದ್ದಾರೆ.
ಸಭೆಯಲ್ಲಿ ಉಕ್ಕು ಹಾಗೂ ಬೃಹತ್ ಕೈಗಾರಿಕೆ ಇಲಾಖೆಯ ಉನ್ನತ ಅಧಿಕಾರಿಗಳು ಭಾಗಿಯಾಗಿದ್ದರು. ಉಕ್ಕು ಸಚಿವಾಲಯದ ಕಾರ್ಯದರ್ಶಿ ನಾಗೇಂದ್ರನಾಥ ಸಿನ್ಹಾ, ಬೃಹತ್ ಕೈಗಾರಿಕೆ ಸಚಿವಾಲಯದ ಕಾರ್ಯದರ್ಶಿ ಕಮರನ್ ರಿಜ್ವಿ, ಸಾರ್ವಜನಿಕ ಉದ್ಯಮ ಕಾರ್ಯದರ್ಶಿಸಂದೀಪ್ ಕುಮಾರ್ ಸಭೆಯಲ್ಲಿ ಭಾಗಿಯಾಗಿದ್ದರು. ಸಭೆಯಲ್ಲಿ ಇಲಾಖೆಗಳ ಕುರಿತು ತಮ್ಮ ಕನಸುಗಳನ್ನು ನೂತನ ಸಚಿವ HDK ಹಂಚಿಕೊಂಡಿದ್ದಾರೆ. ತಾವು ಕರ್ನಾಟಕದ ಸಿಎಂ ಆಗಿದ್ದಾಗ ಕೈಗಾರಿಕೆ ಇಲಾಖೆಯಲ್ಲಿ ತಂದ ಸುಧಾರಣೆಗಳ ಬಗ್ಗೆ ತಿಳಿಸಿದ್ದಾರೆ. ನರೇಂದ್ರ ಮೋದಿ ಅವರ ಕನಸುಗಳನ್ನು ಈಡೇರಿಸುವ ಬದ್ಧತೆ ಬಗ್ಗೆ ಅಧಿಕಾರಿಗಳಿಗೆ ಸಚಿವರು ತಿಳಿಸಿದರು. ಸಾರ್ವಜನಿಕ ಸ್ವಾಮ್ಯದ ಕೈಗಾರಿಕೆಗಳ ಬಗ್ಗೆ ಸಚಿವರು ಮಾಹಿತಿ ಪಡೆದಿದ್ದಾರೆ. ಕೆಜಿಎಫ್ ಗಣಿ ಪ್ರದೇಶದಲ್ಲಿ 12,000 ಎಕರೆ ಭೂಮಿಯನ್ನು ಕೈಗಾರಿಕೆ ಅಭಿವೃದ್ಧಿಗೆ ಬಳಸುವ ಬಗ್ಗೆ ಸಂಸದ ಮಲ್ಲೇಶ್ ಬಾಬು ಸಭೆಯಲ್ಲಿ ಪ್ರಸ್ತಾಪಿಸಿದ್ದಾರೆ.
ಯಾವುದೇ ಉದ್ದೇಶಕ್ಕೆ ಬಳಕೆಯಾಗದೆ ವ್ಯರ್ಥವಾಗಿ ಗಣಿ ಭೂಮಿ ಉಳಿದಿದ್ದು, ದೇಶದ ಉದ್ದಗಲಕ್ಕೂ ಉತ್ಪಾದನೆ ಹೆಚ್ಚಿಸಿ ಹೆಚ್ಚೆಚ್ಚು ಉದ್ಯೋಗ ಕಲ್ಪಿಸುವುದು ತಮ್ಮ ಗುರಿ ಎಂದು ಅಧಿಕಾರಿಗಳಿಗೆ ಸಚಿವರು ತಿಳಿಸಿದರು. ಅಲ್ಲದೇ ಹದಿನೈದು ದಿನಗಳ ಒಳಗಾಗಿ ನೀಲನಕ್ಷೆ ಸಿದ್ಧಪಡಿಸುವ ಬಗ್ಗೆ ಕುಮಾರಸ್ವಾಮಿ ಹೇಳಿದ್ದು, ಉಕ್ಕು ಇಲಾಖೆಯ ಬಗ್ಗೆ ನಾಗೇಂದ್ರನಾಥ ಸಿನ್ಹಾ, ಸಚಿವರಿಗೆ ಮಾಹಿತಿ ನೀಡಿದ್ದಾರೆ. ಮೊದಲ ಸಭೆಯಲ್ಲಿಯೇ ಅಧಿಕಾರಿಗಳಿಂದ ಸಚಿವರು ಕೂಲಂಕಷವಾಗಿ ಮಾಹಿತಿ ಪಡೆದುಕೊಂಡಿದ್ದಾರೆ. ಕೆ.ಎ.ತಿಪ್ಪೇಸ್ವಾಮಿ, ನೂತನ ಸಂಸದ ಮಲ್ಲೇಶ್ ಬಾಬು ಉಪಸ್ಥಿತರಿದ್ದರು.
![](https://ainlivenews.com/wp-content/uploads/2024/01/Ad-Banner-copy-scaled.jpg)