ಮಂಡ್ಯ:– ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಮಂಡ್ಯದಿಂದ ಕಣಕ್ಕಿಳಿಯುವುದು ಖಚಿತವಾಗಿದ್ದು, ಏಪ್ರಿಲ್.4ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಬಾರಿಯೂ ಸಹ ಮಂಡ್ಯ ಲೋಕಸಭಾ ಚುನಾವಣೆ ರಂಗೇರಲಿದೆ.
ಸಚಿವ ಅಮಿತ್ ಶಾ ಓರ್ವ ಗೂಂಡಾ – ನಾಲಿಗೆ ಹರಿಬಿಟ್ಟ ಯತೀಂದ್ರ ಸಿದ್ದರಾಮಯ್ಯ!
ಕರ್ನಾಟಕದಲ್ಲಿ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧಿಸಲಿದೆ. ಹಾಸನ, ಕೋಲಾರ ಮತ್ತು ಮಂಡ್ಯ ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧಿಸಲಿದೆ. ಇದೀಗ ಮಂಡ್ಯ ಜೆಡಿಎಸ್ ಅಭ್ಯರ್ಥಿಯಾಗಿ ಎಚ್ಡಿ ಕುಮಾರಸ್ವಾಮಿ ಅವರು ಏಪ್ರಿಲ್ 4ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಅದೇ ರೀತಿಯಾಗಿ ಉಳಿದ ಎರಡು ಕ್ಷೇತ್ರಗಳಾದ ಹಾಸನದಲ್ಲಿ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಕೋಲಾರ ಕ್ಷೇತ್ರದಿಂದ ಮಲ್ಲೇಶ್ ಬಾಬು ಸ್ಪರ್ಧಿಸಲಿದ್ದಾರೆ. ಕಳೆದ ಚುನಾವಣೆಯಲ್ಲಿ ಪುತ್ರ ನಿಖಿಲ್ ಕುಮಾರಸ್ವಾಮಿ ಸೋಲುಕಂಡಿದ್ದರು. ಆದ್ರೆ, ಈ ಬಾರಿ ಸ್ವತಃ ಕುಮಾರಸ್ವಾಮಿ ಕಣಕ್ಕಿಳಿಯುತ್ತಿರುವುದು ಈ ಬಾರಿ ಮತ್ತೆ ಮಂಡ್ಯ ಲೋಕಸಭಾ ಕ್ಷೇತ್ರ ಭಾರೀ ಸದ್ದು ಮಾಡುವುದಂತೂ ಸತ್ಯ. ಆದ್ರೆ, ಹಾಲಿ ಸಂಸದೆ ಸುಮಲತಾ ಅಂಬರೀಶ್ ನಡೆ ಏನು ಎನ್ನುವುದು ಕುತೂಹಲಕ್ಕೆ ಕಾರಣವಾಗಿದೆ.
ಕಳೆದ ಬಾರಿ ನಿಖಿಲ್ ವಿರುದ್ಧ ಗೆಲುವು ಸಾಧಿಸಿರುವ ಸುಮಲತಾ ಅಂಬರೀಶ್ ಬಳಿಕ ಬಿಜೆಪಿಗೆ ಬೆಂಬಲ ಘೋಷಿಸಿದ್ದರು. ಇದೀಗ ರಾಜಕೀಯ ಎದುರಾಳಿಯಾದ ಜೆಡಿಎಸ್ ಸಹ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದೆ. ಹೀಗಾಗಿ ಈ ಬಾರಿ ಸುಮಲತಾ ಅಂಬರೀಶ್ಗೆ ಟಿಕೆಟ್ ಕೈತಪ್ಪಿದ್ದು, ರಾಜಕೀಯ ಬದ್ಧ ವೈರಿಗೆ ಟಿಕೆಟ್ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಸುಮಲತಾ ಅಂಬರೀಶ್ ಅವರು ಜೆಡಿಎಸ್ಗೆ ಬೆಂಬಲಿಸುವುದರೊಂದಿಗೆ ಮೈತ್ರಿ ಪಾಲನೆ ಮಾಡುತ್ತಾರಾ? ಅಥವಾ ಮತ್ತೆ ಪಕ್ಷೇತರವಾಗಿ ಕಣಕ್ಕಿಳಿಯುತ್ತಾರಾ? ಎನ್ನುವುದು ಮಿಲಿಯನ್ ಡಾಲರ್ ಪ್ರಶ್ನೆಯಾಗಿದೆ.