ಬೆಂಗಳೂರು : ಲೋಕಸಭಾ ಸಮರಕ್ಕೆ ಮಹೂರ್ತ ಫಿಕ್ಸ್ ಆಗಿದೆ. ಬಿಜೆಪಿ ಟಿಕೆಟ್ ಸಿಗದ ಅಸಮಾಧಾನಗೊಂಡಿರುವ ರೇಬಲ್ ಲೇಡಿ ನಡೆ ಇನ್ನೂ ನಿಗೂಢವಾಗಿದೆ. ಇದರ ಮಧ್ಯೆ ಮಂಡ್ಯ ಲೋಕಸಭೆ ಕ್ಷೇತ್ರದ ಬಿಜೆಪಿ ಮುಖಂಡರೊಂದಿಗೆ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ತಮ್ಮ ನಿವಾಸದಲ್ಲಿ ಸಮಾಲೋಚನೆ ನಡೆಸಿದರು.
ನಾನು ವಿಷ ಹಾಕಿದ್ರು ಅಂತ ಕುಮಾರಸ್ವಾಮಿ ಗೆ ಹೇಳಿದ್ದು, ಸುಮಲತಾ ಏಕೆ ಮಾತಾಡಬೇಕು: ಡಿಕೆಶಿ!
ಮಾಜಿ ಉಪ ಮುಖ್ಯಮಂತ್ರಿಗಳಾದ ಡಾ.ಸಿ.ಎನ್. ಅಶ್ವತ್ಥನಾರಾಯಣ, ಸಿ.ಎಸ್.ಪುಟ್ಟರಾಜು, ಡಾ.ಕೆ.ಸಿ.ನಾರಾಯಣಗೌಡ, ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ, ರಾಜ್ಯಸಭೆ ಸದಸ್ಯರಾದ ಜಗ್ಗೇಶ್, ಬೆಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಕೃಷ್ಣಪ್ಪ, ಇಂದ್ರೇಶ್ ಕುಮಾರ್, ಸಚ್ಚಿದಾನಂದ, ಅಶೋಕ್ ಜಯರಾಂ ಮುಂತಾದವರು ಸಭೆಯಲ್ಲಿ ಭಾಗಿಯಾಗಿದ್ದರು.
ಇನ್ನು ಮಂಡ್ಯದಲ್ಲೆ ಸುಮಲತಾರ ಮುಂದಿನ ರಾಜಕೀಯ ನಡೆ ನಿರ್ಧಾರವಾಗಲಿದ್ದು, ಏಪ್ರಿಲ್ 3 ರಂದು ತನ್ನ ಅಂತಿಮ ನಿರ್ಧಾರ ಪ್ರಕಟ ಮಾಡುವುದಾಗಿ ತಿಳಿಸಿದ್ದಾರೆ