ತುಮಕೂರು:- ಗ್ಯಾರಂಟಿಯಿಂದ ಹಳ್ಳಿ ಮಹಿಳೆಯರು ದಾರಿ ತಪ್ಪಿದ್ದಾರೆ ಎಂಬ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ.
IPL 2024: ಲಕ್ನೋ ವಿರುದ್ಧ ಭರ್ಜರಿ ಗೆಲುವು ದಾಖಲಿಸಿದ ಕೋಲ್ಕತ್ತಾ!
ಈ ಸಂಬಂಧ ಮಾತನಾಡಿದ ಅವರು,ನೀನು ಒಂದು ತಾಯಿ ಹೊಟ್ಟೆಯಲ್ಲಿ ಹುಟ್ಟಿದ್ದೀಯಾ. ಆ ತಾಯಿಯ ನೋವು ಅರ್ಥ ಆಗುತ್ತಾ ಎಂದು ಹರಿಹಾಯ್ದಿದ್ದಾರೆ. ಕುಮಾರಸ್ವಾಮಿ ಹೇಳಿಕೆಯಿಂದ ನನಗೆ ಇಂದು ಅತಿ ಹೆಚ್ಚು ದುಃಖ ತಂದಿದೆ. ನನ್ನ ತಾಯಂದಿರು, ಅಕ್ಕಂದಿರು, ಅವರ ತಾಯಿಯ ಮನೆಗೆ ಹೋಗೋಕೆ, ಧರ್ಮಸ್ಥಳ, ಕುಕ್ಕೆಗೆ ಹೋಗಲು ಬಸ್ ಹಿಡಿದ್ರೆ ದಾರಿತಪ್ಪಿದ್ದಾರೆ ಅಂತೀರಾ? ಅವರ ಕ್ಷಮೆ ಕೇಳಿ ಅಂತಾ ಹೇಳಲ್ಲ. ಕ್ಷಮಿಸಲು ಯಾರಿಂದಲೂ ಆಗಲ್ಲ ಎಂದು ಹೇಳಿದ್ದಾರೆ.
ಮಾನ್ಯ ಕುಮಾರಸ್ವಾಮಿ, ದೇಶದ ಪ್ರಧಾನಿಯಾಗಿದ್ದ ದೇವೇಗೌಡರ ಮಗ. ಈ ಭೂಮಿಲಿ ದೊಡ್ಡ ಸ್ಥಾನ ಹೊತ್ತ ದೊಡ್ಡ ಕುಟುಂಬ. ಹೆಚ್.ಡಿ.ದೇವೇಗೌಡರ ಮನೆಯಲ್ಲಿ ಎಂಎಲ್ಎ, ಎಂಪಿಗಳು ಇದ್ದಾರೆ. ಜನರ ಬದುಕಿಗೆ ಶಕ್ತಿ ಕೊಡಬೇಕು ಅಂತಾ ಜನರಿಗೆ 5 ಗ್ಯಾರಂಟಿ ನೀಡಿದ್ದೇವೆ. ಧೀಮಂತ ಮಹಿಳೆ ಇಂದಿರಾಗಾಂಧಿ ನಿಧನರಾದಾಗ ಮನಸ್ಸಿಗೆ ನೋವಾಗಿತ್ತು. ಅದು ಆದ್ಮೆಲೇ ಇಂದು ಮನಸ್ಸಿಗೆ ದುಃಖವಾಗುತ್ತಿದೆ. ಈಗಾಗಲೇ ಹೆಣ್ಣುಮಕ್ಕಳು ಪ್ರತಿಭಟನೆ ಆರಂಭಿಸಿದ್ದಾರೆ. ದೇಶದೆಲ್ಲೆಡೆ ಹೊತ್ತಿಕೊಂಡು ಉರಿಯುತ್ತಿದೆ ಎಂದು ಹೇಳಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)