ಬೆಳಗಾವಿ: ಸ್ನೇಹಿತನ ಜತೆ ಹೊರ ಹೋದವ ತೋಟದ ಮನೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೊಸೂರು ಗ್ರಾಮದಲ್ಲಿ ನಡೆದಿದೆ. ಮಂಜುನಾಥ ಕೋಲಕಾರ(೨೫) ಕೊಲೆಯಾದ ಯುವಕನಾಗಿದ್ದು, ಕೊಲೆಯಾಗುವ ಮುನ್ನ ಪ್ರದೀಪ ಎಂಬ ಯುವಕನ ಜತೆ ಮಂಜುನಾಥ ತಿರುಗಾಟ ನಡೆಸಿದ್ದನು.
ಕೊಲೆಯಾದ ದಿನದಿಂದ ಈವರಗೂ ಯಾರಿಗೂ ಸಿಗದಿರುವುದರಿಂದ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ಪರಾರಿಯಾದನಾ ಎಂಬುವ ಅನುಮಾನ ಕಾಡ ತೊಡಗಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು ಕಣ್ಮರೆಯಾಗಿರುವ ಪ್ರದೀಪಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಇನ್ನೂ ಈ ಘಟನೆ ಸಂಬಂಧ ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.