ಚಿಕ್ಕಮಗಳೂರು: ಮಧ್ಯಪ್ರದೇಶ ಚುನಾವಣಾ ಪ್ರಚಾರ ಇರುವ ಕಾರಣ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ವಿಜಯೇಂದ್ರ ಅವರ ಪದಗ್ರಹಣ ಕಾರ್ಯಕ್ರಮಕ್ಕೆ ಹೋಗಲು ಆಗುತ್ತಿಲ್ಲ. ನಾನು ಯಾವತ್ತೂ ಪಕ್ಷದ ಲಕ್ಷ್ಮಣ ರೇಖೆ ದಾಟಿಲ್ಲ. ಒಂದು ವೇಳೆ, ಬೇಡ ಎನಿಸಿದರೆ ರಾಜಕೀಯ ಬಿಟ್ಟು ಸುಮ್ಮನೆ ಕುಳಿತುಕೊಳ್ಳುತ್ತೇನೆ. ಆದರೆ, ಬೇರೆ ಪಕ್ಷಕ್ಕೆ ಹೋಗಿ ರಾಜಕೀಯ ಮಾಡಲ್ಲ ಎಂದು ಮಾಜಿ ಸಚಿವ ಸಿ.ಟಿ.ರವಿ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರ ಜೊತೆ ಅವರು ಮಾತನಾಡಿದರು.
ನಾನು 20 ವರ್ಷ ಶಾಸಕನಾಗಿದ್ದೆ. 35 ವರ್ಷದಿಂದ ಪಕ್ಷದ ಕಾರ್ಯಕರ್ತನಾಗಿ ವಿವಿಧ ಜವಾಬ್ದಾರಿಗಳನ್ನು ಹೊತ್ತು ಕೆಲಸ ಮಾಡಿದ್ದೇನೆ. ಜಗಳವಾಡಿದರೂ ನಮ್ಮ ಮನೆಯೊಳಗೇ ಜಗಳ, ಹೊಸಿಲು ದಾಟಿ ಬೇರೆಯವರ ಮನೆಗೆ ಹೋಗಿ ನಮ್ಮ ಮನೆಯ ಸಮಸ್ಯೆಯನ್ನು ಬಗೆಹರಿಸಿ ಎಂದು ಕೇಳಿಲ್ಲ. ಪಕ್ಷ ಏನೂ ಜವಾಬ್ದಾರಿ ಕೊಟ್ಟಿಲ್ಲ ಎಂದರೂ ಬಿಜೆಪಿಗೆ ಮತ ಕೊಡಿ ಎಂದೇ ಕೇಳುತ್ತೇನೆ.
![Demo](https://ainlivenews.com/wp-content/uploads/2023/12/spoorthi-1.jpg)
ವಯಸ್ಸಾದಂತೆ ಈ ನೋವುಗಳು ನಿಮ್ಮನ್ನ ಕಾಡುತ್ತಿದ್ದರೆ.. ಇಲ್ಲಿದೆ ಉಚಿತ ಸಲಹೆ ಸರಳ ಚಿಕಿತ್ಸೆ- ಪರಿಹಾರ
ಬೇರೆ ಪಕ್ಷಕ್ಕೆ ಮತ ಕೊಡಿ ಎಂದು ಕೇಳಲಿಕ್ಕೆ ಆಗುವುದಿಲ್ಲ. ನನಗೆ ಬುದ್ಧಿ ಬಂದಾಗಿನಿಂದ, ಬಿಜೆಪಿಗೆ ಸೇರಿದಾಗಿನಿಂದ ಬಿಜೆಪಿ ಬಿಟ್ಟು ಬೇರೆ ಪಕ್ಷಕ್ಕೆ ಮತ ಕೇಳಿಲ್ಲ, ಬೇರೆ ಪಕ್ಷಕ್ಕೆ ಮತ ಹಾಕಿಲ್ಲ. ನನಗಿರುವುದು ಒಂದೇ ಪಕ್ಷ ಅದು ಬಿಜೆಪಿ. ಅಕಸ್ಮಾತ್ ರಾಜಕೀಯ ಬೇಡ ಎನಿಸಿದರೆ ರಾಜಕೀಯ ಬಿಟ್ಟು ಸುಮ್ಮನೆ ಕುಳಿತುಕೊಳ್ಳುತ್ತೇನೆ. ಬಿಜೆಪಿಯನ್ನು ಬಿಟ್ಟು ಮತ್ತೊಂದು ಪಕ್ಷಕ್ಕೆ ಹೋಗಿ ರಾಜಕಾರಣ ಮಾಡುವುದಿಲ್ಲ ಎಂದರು.
![](https://ainlivenews.com/wp-content/uploads/2024/01/Ad-Banner-copy-scaled.jpg)