ಬೆಂಗಳೂರು:– ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ‘ಗೃಹ ಆರೋಗ್ಯ’ ಯೋಜನೆ ಜಾರಿ ಮಾಡಲು ಆರೋಗ್ಯ ಇಲಾಖೆ ಮುಂದಾಗಿದೆ.
ಈ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಕೂಡ ಸಲ್ಲಿಕೆ ಮಾಡಲಾಗಿದ್ದು, ಸಚಿವ ಸಂಪುಟದಲ್ಲಿ ಈಗಾಗಲೇ ಅನುಮೋದನೆ ದೊರೆತಿದೆ. ಮುಂದಿನ ತಿಂಗಳಿನಿಂದ ‘ಗೃಹ ಆರೋಗ್ಯ’ ಯೋಜನೆ ಜಾರಿಯಾಗಲಿದೆ.
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಒಂದಲ್ಲ ಒಂದು ವೈರಸ್ ಹಾವಳಿ ಶುರುವಾಗಿದ್ದು ಜನರ ಜೀವ ತಗೆಯುತ್ತಿವೆ. ಅದರಲ್ಲೂ ಕೋಮಾರ್ಬಿಟಿಸ್ ರೋಗಿಗಳು ಸಾಂಕ್ರಾಮಿಕ ಖಾಯಿಲೆಗಳಿಂದ ಪರದಾಡುವಂತಾಗಿದೆ. ಹೆಚ್ಚುತ್ತಿರುವ ಖಾಯಿಲೆಗಳಿಂದ ಜನರ ಆರೋಗ್ಯದ ಸಮಸ್ಯೆಗಳು ಹೆಚ್ಚಾಗುತ್ತಿವೆ. ಆರೋಗ್ಯ ಇಲಾಖೆಯು ಬಿಪಿ, ಶುಗರ್, ಕ್ಯಾನ್ಸರ್ ಜೊತೆಗೆ ಕೋಮಾರ್ಬಿಟಿಸ್ ಹೊಂದಿರುವ ರೋಗಿಗಳ ಪಟ್ಟಿ ಮಾಡಿದ್ದು ಇವರಿಗೆಲ್ಲ ಮನೆ ಬಾಗಿಲಿನಲ್ಲಿಯೇ ಚಿಕಿತ್ಸೆ ಹಾಗೂ ಔಷಧ ನೀಡುವ ಯೋಜನೆಗೆ ಆರೋಗ್ಯ ಇಲಾಖೆ ಮುಂದಾಗಿದೆ.
ಹೃದಯ, ಕಿಡ್ನಿ, ಕ್ಯಾನ್ಸರ್, ಬಿಪಿ, ಮಧುಮೇಹ, ಇಸಿಜಿ ಸೇರಿದಂತೆ ಎಲ್ಲಾ ರೀತಿಯ ಆರೋಗ್ಯ ತಪಾಸಣೆ ನಡೆಸಿ ಆಯ್ದ ಸಮಸ್ಯೆಗಳಿಗೆ ಅಗತ್ಯವಿರುವಷ್ಟು ಔಷಧಗಳನ್ನು ಸ್ಥಳದಲ್ಲೇ ಉಚಿತವಾಗಿ ನೀಡಲು ಇಲಾಖೆ ಮುಂದಾಗಿದೆ. ಮುಂದಿನ ತಿಂಗಳಿನಿಂದ ರಾಜ್ಯದ ಜನರಿಗೆ ಮನೆ ಮನೆಗೆ ಕ್ಲಿನಿಕ್ ಸೇವೆ ನೀಡಲು ಇಲಾಖೆ ಯೋಜನೆ ಹಾಕಿಕೊಂಡಿದೆ. ಚಿಕಿತ್ಸೆ ಜೊತೆ ಉಚಿತ ಔಷಧಿಯೂ ಮನೆ ಬಾಗಿಲಿಗೆ ಬರಲಿದೆ.
ಮುಂದಿನ ತಿಂಗಳು ರಾಜಧಾನಿ ಬೆಂಗಳೂರು ಸೇರಿದ್ದಂತೆ ರಾಜ್ಯದಲ್ಲಿ ‘ಗೃಹ ಆರೋಗ್ಯ’ ಯೋಜನೆ ಜಾರಿಗೆ ಆರೋಗ್ಯ ಇಲಾಖೆ ಮುಂದಾಗಿದೆ.
ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗೃಹ ಆರೋಗ್ಯ ಯೋಜನೆ ಜಾರಿ ತರಲು ಆರೋಗ್ಯ ಇಲಾಖೆ ಚಿಂತನೆ ನಡೆಸಿದೆ. ಮುಂದಿನ ತಿಂಗಳು ಗೃಹ ಆರೋಗ್ಯ ಯೋಜನೆ ಜಾರಿಯಾಗಲಿದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗೂಂಡುರಾವ್ ತಿಳಿಸಿದ್ದಾರೆ.