ಬೆಂಗಳೂರು:– ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಸಹ ಕರೆಂಟ್ ಕಟ್! ಎಲ್ಲೆಲ್ಲಿ!?
ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಕೊಡಗು, ಮಂಡ್ಯ, ದಕ್ಷಿಣ ಕನ್ನಡ, ಚಾಮರಾಜನಗರ, ಕೋಲಾರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಹಲವೆಡೆ, ಹಾವೇರಿ, ವಿಜಯನಗರ ಜಿಲ್ಲೆಯ ಕೆಲವೆಡೆ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನುಳಿದ ಜಿಲ್ಲೆಗಳಿಗೆ ಯಾವುದೇ ಮಳೆ ಮುನ್ಸೂಚನೆ ಇರುವುದಿಲ್ಲ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ಡಿಸೆಂಬರ್ 14ರಂದು ಕೆಲವೆ ಜಿಲ್ಲೆಗಳಲ್ಲಿ ಮಾತ್ರ ಜಿನುಗು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಾರಿ ಅಂದರೆ 2024ರ ಜೂನ್ ಆರಂಭದಲ್ಲಿಯೇ ಮುಂಗಾರು ಮಳೆ ಆರ್ಭಟಿಸಿದ್ದು, ಪರಿಣಾಣ ಕೆರೆ-ಕಟ್ಟೆಗಳು, ನದಿಗಳು, ಪ್ರಮುಖ ಜಲಾಶಯಗಳು ಭರ್ತಿಯಾಗಿವೆ. ಇದರಿಂದ ಅನ್ನದಾತರ ಮುಖದಲ್ಲಿ ಮಂದಹಾಸ ಮೂಡಿದತಾಗಿದೆ.