ಬೆಂಗಳೂರು:- ಜೂನ್ 22ರಿಂದ 24ರವರೆಗೆ ಕಲಬುರಗಿ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ಮುನ್ಸೂಚನೆ ನೀಡಲಾಗಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಕರಾವಳಿ ಭಾಗದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯ ಜೊತೆ ಭೂ ಕುಸಿತದ ಸಾಧ್ಯತೆ ಇದೆ. ಹೀಗಾಗಿ ಕರಾವಳಿ ಭಾಗಕ್ಕೆ ಜೂ. 23 ರಂದು ರೆಡ್ ಅಲರ್ಟ್ ಕೂಡ ಘೋಷಣೆ ಮಾಡಲಾಗಿದೆ. ಸಮುದ್ರ ಭಾಗದಲ್ಲಿ 45 ರಿಂದ 55 ಕಿ.ಮಿ ವೇಗದಲ್ಲಿ ಗಾಳಿ ಬೀಸುವ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ.
ಹುಬ್ಬಳ್ಳಿಯಲ್ಲಿ ಅರ್ಧ ಗಂಟೆಯಿಂದ ಧಾರಕಾರ ಮಳೆ ಸುರಿದಿದೆ. ಎರಡುಮೂರು ದಿನಗಳಿಂದ ಮರೆಯಾಗಿದ್ದ ವರುಣ ಇಂದು ಏಕಾಏಕಿ ಆರಂಭವಾದ ಮಳೆಗೆ ಜನಜೀವನ ಅಸ್ತವ್ಯಸ್ತ ಆಗಿದೆ.
ಬೆಂಗಳೂರಿನಲ್ಲಿ ಕೆಲ ದಿನಗಳಿಂದ ಬಿಡುವು ಕೊಟ್ಟಿದ್ದ ಮಳೆ ಇಂದು ಮತ್ತೆ ಎಂಟ್ರಿ ಕೊಟ್ಟಿದ್ದ. ನಾಗವಾರ, ಬಾಣಸವಾಡಿ, ರಿಂಗ ರಸ್ತೆ ಸೇರಿದಂತೆ ನಗರದ ಹಲವೆಡೆ ತುಂತುರು ಮಳೆ ಸುರಿದಿದೆ. ಇನ್ನೂ ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ಹಗುರದಿಂದ ಸಾಧಾರಣ ಮಳೆ ಇದೆ. ಜೂನ್ 23 ರಿಂದ ರಾಜ್ಯಾದ್ಯಂತ ಮಳೆ ಚುರುಕುಗೊಳ್ಳಲಿದೆ.
ನೆಲಮಂಗಲದ ಪೀಣ್ಯಾ, ದಾಸರಹಳ್ಳಿ, ಬಾಗಲಗುಂಟೆ, ಶೆಟ್ಟಿಹಳ್ಳಿ, ಮಲ್ಲಸಂದ್ರ ಸೇರಿದಂತೆ ಗಾಳಿ ಸಹಿತ ಭಾರಿ ಮಳೆ ಆಗಿದೆ. ಜೋರು ಮಳೆಗೆ ವಾಹನ ಸವಾರರಿಗೆ ಸಂಕಷ್ಟ ಎದುರಾಗಿತ್ತು.