ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವೆಡೆ ಜೋರು ಮಳೆ ಆಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ಸಿಲಿಕಾನ್ ಸಿಟಿ ಕೂಲ್ ಕೂಲ್ ಆಗಿದ್ದಾರೆ.
ಪ್ರಜ್ವಲ್ ರೇವಣ್ಣ ಆಶ್ಲೀಲ ವಿಡಿಯೋ ಕೇಸ್..! ಸಂತ್ರಸ್ತೆರನ್ನ ಗೌಪ್ಯ ಸ್ಥಳದಲ್ಲಿಟ್ಟು ಹೇಳಿಕೆ ಪಡೆಯುತ್ತಿರೋ ಎಸ್ಐಟಿ…!
ನಗರದ ಫ್ರೇಜರ್ ಟೌನ್, ರಿಚ್ಮಂಡ್ ಟೌನ್ ಸೇರಿದಂತೆ ಹಲವೆಡೆ ದಿಢೀರ್ ಮಳೆಯಿಂದ ವಾಹನ ಸವಾರರು ಪರದಾಡುವಂತಾಗಿದೆ. ಇನ್ನು ರಾಜ್ಯದಲ್ಲಿ ಕೆಲವು ದಿನಗಳ ಕಾಲ ಬಿಸಿಗಾಳಿಯು ಮುಂದುವರೆಯಲಿದ್ದು, ಈ ಮಧ್ಯೆ ಏ.30 ರಿಂದ ಮೇ.03 ರ ನಡುವೆ ಬೆಂಗಳೂರಿನಲ್ಲಿ ಮಳೆಯಾಗುತ್ತದೆ ಎಂದು ಭಾರತದ ಹವಾಮಾನ ಇಲಾಖೆ ಹೇಳಿತ್ತು. ಅದರಂತೆ ಇಂದು(ಮೇ.02) ಮೆಜೆಸ್ಟಿಕ್, ರಾಜಾಜಿನಗರ, ರೇಸ್ ಕೋರ್ಸ್ ಸುತ್ತಮುತ್ತ ತುಂತುರು ಮಳೆ ಆರಂಭವಾಗಿದೆ. ಬಿಸಿಲಿನ ತಾಪದಿಂದ ಬಸವಳಿದ ಬೆಂಗಳೂರಿನಲ್ಲಿ ವರುಣನ ಆಗಮನವಾಗಿದ್ದು, ಸಂಜೆಯಾಗ್ತಿದ್ದಂತೆ ಮೋಡ ದಟ್ಟವಾಗುತ್ತಿದೆ. ಈ ಹಿನ್ನಲೆ ರಾತ್ರಿ ವೇಳೆಗೆ ಜೋರು ಮಳೆ ಬರುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಅಷ್ಟೇ ಅಲ್ಲದೆ, ಇತ್ತ ಕೋಲಾರ ಜಿಲ್ಲೆಯ ಕೆಜಿಎಫ್ ನಗರದಲ್ಲಿ ಮಳೆಯ ಸಿಂಚನವಾಗಿದೆ. ಬಿಸಿಗಾಳಿ, ಒಣ ಹವೆಯಿಂದ ಬೇಸತ್ತು ಹೋಗಿದ್ದ ವಾತಾವರಣ ತಣ್ಣಗಾಗಿದೆ.