ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಇಂದು ಬೆಳಗ್ಗೆ ಮೋಡ ಮುಸುಕಿದ ವಾತಾವರಣ ಇದ್ದು, ನಿನ್ನೆ ಬೆಳಗ್ಗಿಗಿಂತ ಇಂದು ತಂಪಾದ ವಾತಾವರಣ ಕಮ್ಮಿ ಇದೆ. ಬೆಂಗಳೂರು ನಗರದಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇಲ್ಲ ಎಂದು ಹವಾಮಾನ ತಜ್ಞರು ಹೇಳಿದ್ದಾರೆ.
ಕರ್ನಾಟಕದ ಉಳಿದ ಜಿಲ್ಲೆಯ ವಾತಾವರಣದ ಬಗ್ಗೆ ನೋಡೋದಾದ್ರೆ, ಸಾಮಾನ್ಯವಾಗಿ ಕಳೆದ ಕೆಲ ತಿಂಗಳುಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಮೈಸೂರು ಸೇರಿದಂತೆ ಯಾವುದೇ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆ ಇದೆ.
ಇಂದು ಒಡಿಶಾ ಮತ್ತು ಪಶ್ಚಿಮ ಬಂಗಾಳದ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಯೂರ್ಭಂಜ್, ಕಿಯೋಂಜಾರ್, ಬಾಲಸೋರ್ ಮತ್ತು ಭದ್ರಕ್ ಜಿಲ್ಲೆಗಳಲ್ಲಿ ಮತ್ತು ಕೇಂದ್ರಪಾರ, ಕಟಕ್, ಧೆಂಕನಲ್ ಮತ್ತು ಜಾಜ್ಪುರದಲ್ಲಿ ಮಳೆಯಾಗ ಬಹುದು ಎಂದು ಹೇಳಿದೆ.