ಬೆಂಗಳೂರು:- ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಇಂದು ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ.
IPL 2024: RCB ಅಭಿಮಾನಿಗಳನ್ನು ಕೊಂಡಾಡಿದ ಕಿಂಗ್ ಕೊಹ್ಲಿ..!
ವಿಜಯಪುರ, ಬೆಳಗಾವಿ, ಬಾಗಲಕೋಟೆ, ಕೊಪ್ಪಳ, ಯಾದಗಿರಿ, ದಾವಣಗೆರೆ, ಚಿತ್ರದುರ್ಗ, ರಾಮನಗರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಸೂಚನೆ ನೀಡಿದೆ. ಕಲಬುರಗಿ, ರಾಯಚೂರು, ಕೊಡಗು, ಕೋಲಾರ, ಗದಗ, ಹಾಸನ, ಬಳ್ಳಾರಿ, ಚಿಕ್ಕಮಗಳೂರು, ತುಮಕೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ. ಈ ಬಾರಿಯ ಬಿಸಿಲು ಜನರನ್ನು ಹೈರಾಣಾಗಿಸಿದೆ. ಅದರಲ್ಲೂ ಬೆಂಗಳೂರಲ್ಲಿ ತಾಪಮಾನ ಏರುತ್ತಲೇ ಇದೆ. ಸಿಲಿಕಾನ್ ಸಿಟಿ ಮಂದಿ ಬಿಸಿಲಿನ ಝಳಕ್ಕೆ ತತ್ತರಿಸಿದ್ದಾರೆ.
ಇಂದು ಮತದಾನ ಇರುವುದರಿಂದ, ಹೀಟ್ ವೇವ್ನಿಂದ ಜನ ಮತ ಹಾಕಲು ಹೋಗದೇ ಇರಬಹುದು. ಅದಕ್ಕೆ ಮತಗಟ್ಟೆಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.