ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಬೆಂಡೆಕಾಯಿ ಎಷ್ಟು ಪ್ರಯೋಜನಕಾರಿ ಗೊತ್ತಾ!?.. ಶುಗರ್ ಜೊತೆಗೆ ತೂಕನೂ ಇಳಿಸುತ್ತೆ !
ರಾಜಧಾನಿ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ, ಇಂದು ಕೂಡ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕೃತ ಮಾಹಿತಿ ನೀಡಿದೆ. ಹೀಗಾಗಿ ಜನರು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ
ಹಾಸನ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ ಆದೇಶ ಹೊರಡಿಸಿದೆ. ಇನ್ನೂ ಗುಡುಗು ಮಿಂಚು , ಗಾಳಿ ಸಹಿತ ಮಳೆ ಆಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕಕ್ಕೆ ಮುಂಗಾರು ಮಳೆ ಅಧಿಕೃತವಾಗಿ ಆಗಮಿಸಿದೆ. ಈ ಕುರಿತು ಭಾರತೀಯ ಹವಾಮಾನ ಇಲಾಖೆ ಅಧಿಕೃತ ಘೋಷಣೆ ಮಾಡಿದೆ. ದಕ್ಷಿಣ ಕರ್ನಾಟಕ ಭಾಗದಲ್ಲಿ ಸುರಿದ ಮಳೆ ಮುಂಗಾರು ಮಳೆಯಾಗಿದ್ದು, ಕರಾವಳಿ, ಮಲೆನಾಡು, ಬೆಂಗಳೂರು, ದಕ್ಷಿಣ ಕರ್ನಾಟಕ ಭಾಗಕ್ಕೆ ಮುಂಗಾರು ಮಳೆ ಎಂಟ್ರಿ ಕೊಟ್ಟಿದೆ