ಬೆಂಗಳೂರು:- ಕರ್ನಾಟಕದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, 13 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.
ಕರ್ನಾಟಕದ ಕರಾವಳಿಯಲ್ಲಿ ವ್ಯಾಪಕ ಹಗುರದಿಂದ ಸಾಧಾರಣ ಮಳೆಯಾದರೆ, ಮಲೆನಾಡು ಸುತ್ತಮುತ್ತ ಚದುರಿದಂತೆ ಹಗುರದಿಂದ ಮಳೆಯಾಗಲಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ವ್ಯಾಪಕವಾಗಿ ಅತ್ಯಂತ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಗ್ರಾಮಾಂತರ ಹಾಗೂ ತುಮಕೂರು ಮತ್ತು ರಾಮನಗರ ಸುತ್ತಮುತ್ತ ಸಾಧಾರಣ ಮಳೆಯಾಗಲಿದ್ದು, ಉಳಿದ ಭಾಗಗಳಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಕೂಡಿರಲಿದೆ. ಉತ್ತರ ಒಳನಾಡಿನಲ್ಲಿ ಬೀದರ್ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಸಾಕಷ್ಟು ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಉಳಿದಂತೆ ಹಗುರದಿಂದ ಮಳೆಯಾಗಲಿದೆ.
ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕವಾಗಿ ಮಳೆ ಸುರಿಯಲಿದೆ. ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನ ಅನುಕ್ರಮವಾಗಿ 27 ಮತ್ತು 20 ಡಿ.ಸೆ ಇರಲಿದೆ
ಭಾರಿ ಮಳೆಯೊಂದಿಗೆ ಗುಡುಗು ಇರಲಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ಬೆಳಗಾವಿ, ವಿಜಯಪುರ, ಹಾಸನ ಮತ್ತು ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಎಚ್ಚರಿಕೆ ನೀಡಲಾಗಿದೆ.