ಮೈಸೂರು:- ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಧಾರಾಕಾರ ಮಳೆ ಸುರಿದಿದ್ದು, ಮಳೆಯ ಆರ್ಭಟಕ್ಕೆ ಮರಗಳು ಧರೆಗುರುಳಿದಿದೆ.
Ballari: ಚುನಾವಣೆ ಮುಕ್ತಾಯ ಬೆನ್ನಲ್ಲೇ ರಿಲ್ಯಾಕ್ಸ್ ಮೂಡಲ್ಲಿ ಬಿ.ಶ್ರೀರಾಮುಲು!
ಚಾಮುಂಡಿಪುರಂ ಬಡಾವಣೆಯಲ್ಲಿ 4 ವಿದ್ಯುತ್ ಕಂಬಗಳು ಕೂಡ ಧರಾಶಾಯಿಯಾಗಿವೆ. ಚಾಮುಂಡಿಬೆಟ್ಟದ ಮೆಟ್ಟಿಲು ರಸ್ತೆಯಲ್ಲಿ ಬೃಹತ್ ಗಾತ್ರದ ಮರ ಮುರಿದುಬಿದ್ದಿದೆ. ಭಾರಿ ಮಳೆ ಗಾಳಿಗೆ ವಿದ್ಯುತ್ ಕಂಬಗಳು ಕೂಡ ಧರೆಗುರುಳಿವೆ.
ಭಾರಿ ಮಳೆ ಬರುತ್ತಿದ್ದ ಕಾರಣ ರಸ್ತೆಯಲ್ಲಿ ಯಾರು ಇರಲಿಲ್ಲ. ಹೀಗಾಗಿ ಭಾರಿ ಅನಾಹುತ ಸ್ವಲ್ಪದರಲ್ಲೇ ತಪ್ಪಿದೆ. ಯಾರಿಗೂ ಯಾವುದೇ ಅಪಾಯ ಸಂಭವಿಸಿಲ್ಲ. ಮೈಸೂರಿನ ಬಹುತೇಕ ಕಡೆಗಳಲ್ಲಿ ಇಂಥದ್ದೇ ಅನಾಹುತ ಸಂಭವಿಸಿದೆ.
ಕಳೆದ ಶುಕ್ರವಾರ ಕೂಡ ಮೈಸೂರಿನ ಹಲವು ಕಡೆಗಳಲ್ಲಿ ಗಾಳಿ ಮಳೆಯಿಂದ ಅನಾಹುತ ಸಂಭವಿಸಿತ್ತು