ಬೆಂಗಳೂರು: ರಾಜ್ಯಪಾಲರು ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ ಮುಂದೇನು ಎಂಬ ಪ್ರಶ್ನೆ ಉದ್ಭವಿಸಿದೆ. ಮುಂದಿನ ಕಾನೂನು ಪ್ರಕ್ರಿಯೆ ಏನಿರಲಿದೆ? ಸಿಎಂ ಸಿದ್ದರಾಮಯ್ಯ ಪರ ವಕೀಲರ ನಡೆ ಏನಿರಲಿದೆ? ಈಗ ಎಲ್ಲರಿಗೂ ಕಾಡುತ್ತಿರುವ ಪ್ರಶ್ನೆಯಾಗಿದ್ದು ಏನೆಂಬುದನ್ನು ನಾವಿಲ್ಲಿ ನೋಡೋಣ.
BIGG BREAKING: ಸಿಎಂ ಸಿದ್ದರಾಮಯ್ಯಗೆ ಭಾರೀ ಹಿನ್ನಡೆ: ರಾಜ್ಯಪಾಲರ ಆದೇಶ ಎತ್ತಿ ಹಿಡಿದ ಹೈಕೋರ್ಟ್
ಸಿದ್ದರಾಮಯ್ಯ ವಿರುದ್ಧದ ಪ್ರಕರಣ ಇಂದು ಅಥವಾ ನಾಳೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆಗೆ ಬರಲಿದೆ. ಸದ್ಯ ದೂರುದಾರರು ಹೈಕೋರ್ಟ್ ಆದೇಶದ ಪ್ರತಿಯೊಂದುಗೆ ತೆರಳಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವಿಚಾರಣೆಗಾಗಿ ಮನವಿ ಮಾಡಲಿದ್ದಾರೆ. ಇದನ್ನು ಪರಿಗಣಿಸಿ ನ್ಯಾಯಾಲಯ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶ ನೀಡುವ ಸಾಧ್ಯತೆ ಇದೆ.
ಒಂದು ವೇಳೆ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶ ನೀಡಿದಲ್ಲಿ, ಅವರ ವಿರುದ್ಧ ಎಫ್ಐಆರ್ ದಾಖಲಾಗಲಿದೆ. ಇದು ಸಿದ್ದರಾಮಯ್ಯ ಅವರ ಸಂಕಷ್ಟವನ್ನು ಮತ್ತಷ್ಟು ಹೆಚ್ಚಿಸಲಿದೆ.
ಈ ಮಧ್ಯೆ, ಸಿಎಂ ಅರ್ಜಿಯನ್ನು ತಿರಸ್ಕರಿಸಿದ ಆದೇಶದ ವಿರುದ್ಧ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ನಾಳೆಯೇ ಮೇಲ್ಮನವಿ ಸಲ್ಲಿಸಲು ಸಿಎಂ ಪರ ವಕೀಲರು ಸಿದ್ಧತೆ ನಡೆಸಿದ್ದಾರೆ. ಇಂದು ಆದೇಶದ ಪ್ರತಿ ಪಡೆಯಲಿರುವ ವಕೀಲರು, ನಾಳೆಯೇ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲು ಸಿದ್ಧತೆ ನಡೆಸುತ್ತಿದ್ದಾರೆ.