ಬೆಂಗಳೂರು: ಅಪ್ರಾಪ್ತೆ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲುಪಾಲಾಗಿರುವ ಆರೋಪಿಗೆ ಸಂತ್ರಸ್ತೆಯನ್ನೇ ಮದುವೆಯಾಗಲು ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿ ಮಾನವೀಯತೆ ಮರೆದಿರುವ ಅಪರೂಪದ ಘಟನೆ ನಡೆದಿದೆ. ತನ್ನ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ರದ್ದು ಕೋರಿ ಮೈಸೂರಿನ ಆರೋಪಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ನಡೆಸಿತ್ತು.
ಅದರಂತೆ ಸಂತ್ರಸ್ತೆಯನ್ನು ಮದುವೆಯಾಗಲು 2024ರ ಜೂ.17 ರಿಂದ ಅನ್ವಯವಾಗುವಂತೆ ಜು.3ರವರೆಗೆ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಗೆ ನ್ಯಾಯಾಲಯ ಆದೇಶಿಸಿದೆ. ಸಂತ್ರಸ್ತೆಯನ್ನು ಮದುವೆಯಾಗಿ ಜು.3 ರ ಸಂಜೆ ಹಿಂದಿರುಗಬೇಕು. ಜು.4ರಂದು ವಿವಾಹ ನೋಂದಣಿ ಪತ್ರವನ್ನು ಕೋರ್ಟ್ಗೆ ಸಲ್ಲಿಸಬೇಕು. ಜಾಮೀನು ಮೇಲೆ ಹೊರಗಿರುವ ಸಮಯದಲ್ಲಿ ಆತ ಸಂಬಂಧಪಟ್ಟ ಪೊಲೀಸ್ ಠಾಣೆಗೆ ವಾರಕ್ಕೊಮ್ಮೆ ಹಾಜರಾಗಬೇಕು ಎಂದು ನಿರ್ದೇಶಿಸಿರುವ ನ್ಯಾಯಪೀಠ,
Masala Peanuts: ಬೇಕರಿಯಲ್ಲಿ ಸಿಗುವ ಮಸಾಲಾ ಶೇಂಗಾ ಮನೆಯಲ್ಲೇ ಮಾಡಿ..! ಇಲ್ಲಿದೆ ರೆಸಿಪಿ
ವಿಚಾರಣೆಯನ್ನು ಜು.4ಕ್ಕೆ ಮುಂದೂಡಿದೆ. ಆರೋಪಿಯ ಲೈಂಗಿಕ ಸಂಪರ್ಕದಿಂದ ಸಂತ್ರಸ್ತೆಗೆ ಮಗು ಜನಿಸಿದೆ. ಸಂತ್ರಸ್ತೆಗೆ ಸದ್ಯ 18 ವರ್ಷ. ಈ ಹಿಂದೆ ಏನೆಲ್ಲಾ ಘಟನೆಗಳು ನಡೆದಿವೆ ಎನ್ನುವುದು ಮಗುವಿಗೆ ತಿಳಿದಿಲ್ಲ. ಮಗು ಮತ್ತು ಸಂತ್ರಸ್ತೆಯ ಹಿತ ರಕ್ಷಿಸಬೇಕಿದೆ. ಮಗು ಭವಿಷ್ಯದಲ್ಲಿ ಯಾವುದೇ ರೀತಿಯಲ್ಲಿ ಅವಮಾನಕ್ಕೆ ಗುರಿಯಾಗಬಾರದು ಎಂದು ಅಭಿಪ್ರಾಯಪಟ್ಟು ನ್ಯಾಯಾಲಯ ಈ ಆದೇಶ ಹೊರಡಿಸಿದೆ.
ಎಲ್ಲಾಅಂಶಗಳನ್ನು ಪರಿಗಣಿಸಿದ ನ್ಯಾಯಪೀಠ, ಆರೋಪಿ ಮತ್ತು ಸಂತ್ರಸ್ತೆಯೇ ಮಗುವಿನ ಜೈವಿಕ ತಂದೆ-ತಾಯಿ ಎಂಬುದು ಮಗುವಿನ ಡಿಎನ್ಎ ವರದಿ ಸ್ಪಷ್ಟಪಡಿಸುತ್ತದೆ. ಮಗುವನ್ನು ಸಂತ್ರಸ್ತೆ ತಾಯಿ ಪೋಷಣೆ ಮಾಡಬೇಕಿದೆ. ಸಣ್ಣ ಮಗುವಿಗೆ ಈ ಹಿಂದೆ ಏನೆಲ್ಲಾ ಘಟನೆ ನಡೆದಿದೆ ಎಂಬುದು ಗೊತ್ತಿಲ್ಲ. ಮಗು ಭವಿಷ್ಯದಲ್ಲಿಯಾವುದೇ ರೀತಿಯ ಅವಮಾನ ಅನುಭವಿಸಬಾರದು. ಹಾಗಾಗಿ, ಜಾಮೀನು ನೀಡಲಾಗುತ್ತಿದೆ ಎಂದು ನ್ಯಾಯಾಲಯ ಆದೇಶಿಸಿದೆ.