ಬೆಂಗಳೂರು:- ಕಲಬುರಗಿ ವಕೀಲ ಪಾಟೀಲ ಹತ್ಯೆಗೆ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದೆ.
ವಿಚಾರಣೆ ವೇಳೆ ಈರಗಣ್ಣ ಗೌಡರ ಹತ್ಯೆ ಘಟನೆಯನ್ನು ಪ್ರಸ್ತಾಪಿಸಿದ ನ್ಯಾಯಮೂರ್ತಿ ವಿ.ಶ್ರೀಷಾನಂದ ಅವರು, 20 ಎಕರೆ ಜಾಗದ ಮೇಲಿನ ಹಕ್ಕಿನ ವಿಚಾರ ಸಂಬಂಧ ಈ ಕೊಲೆ ನಡೆದಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಅಲ್ಲದೆ, ಇಂತಹ ಘಟನೆಗಳನ್ನು ಮಟ್ಟಹಾಕದೆ ಹೋದರೆ ಮುಂದಿನ 20 ವರ್ಷಗಳ ನಂತರ ಸಿವಿಲ್ ವ್ಯಾಜ್ಯಗಳು ಕೋರ್ಟ್ಗೆ ದಾಖಲಾಗುವುದು ಅನುಮಾನ, ಕೊಲೆಗಡುಕರು ಮುಂದೊಂದು ದಿನ ಶ್ರೀಸಾಮಾನ್ಯರನ್ನು ಬೆದರಿಸಿ ಸಿವಿಲ್ ವ್ಯಾಜ್ಯಗಳನ್ನು ತಾವೇ ಇತ್ಯರ್ಥ ಮಾಡಿಕೊಳ್ಳುತ್ತಾರೆ. ಈ ಹೇಯ ಕೃತ್ಯಗಳು ನಿಜಕ್ಕೂ ವ್ಯವಸ್ಥೆಗೆ ಬೆದರಿಕೆಯಾಗಿದೆ ಎಂದು ನ್ಯಾಯಮೂರ್ತಿಗಳು ಮೌಖಿಕವಾಗಿ ನುಡಿದರು
ಇನ್ನೂ ನಗರದ ಜೀವರ್ಗಿ ರಸ್ತೆಯ ಸಾಯಿ ಮಂದಿರ ಬಳಿಯ ಅಪಾರ್ಟ್ಮೆಂಟ್ ಬಳಿ ಡಿ.7ರಂದು ನಡೆದ ಹೈಕೋರ್ಟ್ ವಕೀಲ ಈರಣ್ಣಗೌಡ ಪೊಲೀಸ್ ಪಾಟೀಲ ಹತ್ಯೆಗೆ ಸಂಬಂಧಿಸಿ ಅವರ ಸೋದರ ಸಂಬಂಧಿ ನೀಲಕಂಠಗೌಡ ಪೊಲೀಸ್ ಪಾಟೀಲ್ ದಂಪತಿಯನ್ನು ವಿವಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಹೊಲದ ಆಸ್ತಿ ವಿಚಾರವಾಗಿ ಕೊಲೆ ನಡೆದಿದ್ದು, ನೀಲಕಂಠಗೌಡ ಮತ್ತವರ ಪತ್ನಿ ಸಿದ್ದಮ್ಮ ಸುಪಾರಿ ಕೊಟ್ಟಿದ್ದು, ಕೊಲೆ ನಡೆದ ವೇಳೆ ದತ್ತಾತ್ರೇಯನ ಕ್ಷೇತ್ರ ಗಾಣಗಾಪುರಕ್ಕೆ ತೆರಳಿದ್ದ ವಿಚಾರ ಪೊಲೀಸರ ತನಿಖೆಯಿಂದ ಬಯಲಾಗಿದೆ.