ಬೆಂಗಳೂರು:- ಕರ್ನಾಟಕ ಹೈಕೋರ್ಟ್, ಮಕ್ಕಳ ಹೆಸರು ಬದಲಾವಣೆಗೆ ಹೊಸ ಮಾರ್ಗಸೂಚಿ ರೂಪಿಸಿದೆ. ನ್ಯಾ.ಎನ್.ಎಸ್.ಸಂಜಯ್ ಗೌಡ ಅವರಿದ್ದ ಹೈಕೋರ್ಟ್ ಪೀಠ ಇಂದು ಆದೇಶ ಹೊರಡಿಸಿದೆ.
ಅನಧಿಕೃತವಾಗಿ ತಲೆ ಎತ್ತಿದ ರೆಸಾರ್ಟ್ ಗಳು: ರಾಜ್ಯ ಸರ್ಕಾರಕ್ಕೆ ಕೋಟಿ-ಕೋಟಿ ವಂಚನೆ!
ಅದ್ರಿತ್ ಭಟ್ ಹೆಸರನ್ನು ಶ್ರೀಜಿತ್ ಭಟ್ ಎಂದು ಬದಲಿಸಲು ಕೋರಲಾಗಿತ್ತು. ಆದರೆ ಉಡುಪಿ ಜನನ ನೋಂದಣಾಧಿಕಾರಿಗಳು ನಿರಾಕರಿಸಿದ ಹಿನ್ನೆಲೆ ರಿಟ್ ಸಲ್ಲಿಕೆ ಮಾಡಲಾಗಿತ್ತು. ಇಂದು ವಿಚಾರಣೆ ಮಾಡಿದ ಹೈಕೋರ್ಟ್, ಮಗುವಿನ ಹೆಸರು ಬದಲಾವಣೆಗೆ ತಂದೆ ತಾಯಿ ಪ್ರಮಾಣಪತ್ರ ಸಲ್ಲಿಸಬೇಕು. ತಂದೆ ತಾಯಿಯ ಗುರುತು ಧೃಡಪಟ್ಟ ನಂತರ ಹೆಸರು ಬದಲಾವಣೆ ಮಾಡಬಹುದಾಗಿದೆ. ಆದರೆ ಹೊಸ ಹೆಸರಿನೊಂದಿಗೆ, ಹಳೆಯ ಹೆಸರೂ ದಾಖಲೆಯಲ್ಲಿರಬೇಕು. ಇದರಿಂದ ದುರುದ್ದೇಶದ ಹೆಸರು ಬದಲಾವಣೆ ತಪ್ಪಿಸಬಹುದಾಗಿದೆ ಎಂದು ತಿಳಿಸಿದೆ.
ವಯಸ್ಕರ ಹೆಸರು ಬದಲಾವಣೆಗೂ ಇದೇ ಪದ್ಧತಿ ಅನುಸರಿಸಬಹುದು. ಸರ್ಕಾರ ಸೂಕ್ತ ನಿಯಮ ರೂಪಿಸುವವರೆಗೂ ಈ ನಿರ್ದೇಶನ ಪಾಲಿಸಬೇಕು ಎಂದು ಜನನ ನೋಂದಣಾಧಿಕಾರಿಗಳಿಗೆ ನ್ಯಾ.ಎನ್.ಎಸ್.ಸಂಜಯ್ ಗೌಡ ಸೂಚನೆ ನೀಡಿದ್ದಾರೆ.