ಮಂಡ್ಯ:- ನಾಗಮಂಗಲ ಗಲಭೆ ಕೇಸ್ ಗೆ ಸಂಬಂಧಿಸಿದಂತೆ ಆರೋಪಿಗಳ ಮೇಲೆ ಕಠಿಣ ಕ್ರಮಕ್ಕೆ ಹಿಂದೂ ಜನಜಾಗೃತ ಸಮಿತಿ ಒತ್ತಾಯ ಮಾಡಿದೆ.
ಗಣೇಶೋತ್ಸವದ ವೇಳೆ ಕಲ್ಲು ತೂರಾಟದ ಜೊತೆಗೆ ಪೆಟ್ರೋಲ್ ಬಾಂಬ್ ಎಸೆದು ಭಯೋತ್ಪಾದಕ ಕೃತ್ಯ ಮಾಡಲಾಗಿದೆ. ಇದೇ ರೀತಿ ಶಿವಮೊಗ್ಗ ಕೋಲಾರದಲ್ಲಿಕಳೆದ ವರ್ಷ ಗಣೇಶೋತ್ಸವದ ವೇಳೆ ಕಲ್ಲು ತೂರಾಟ ನಡೆದಿದೆ.
ಈ ವರ್ಷವೂ ಹಲವು ಕಡೆ ಕಲ್ಲು ತೂರಾಟ ನಡೆದಿರುವ ಘಟನೆಗಳು ಬೆಳಕಿಗೆ ಬರ್ತಾ ಇದೆ. ಇದು ಸಮಾಜದಲ್ಲಿ ಕೋಮು ಸೌಹಾರ್ದ ಕದಡುವ ಕೆಲಸವಾಗುತ್ತಿದೆ. ಈ ವಿಚಾರವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ತೆಗೆದುಕೊಂಡು, ಇಂತಹ ಪ್ರಕರಣಗಳ ಹಿಂದೆ ಇರುವವರಿಗೆ ಸೂಕ್ತವಾದ ಕಾನೂನು ಕ್ರಮ ತೆಗೆದು ಕೊಳ್ಳ ಬೇಕೆಂದು ಹಿಂದೂ ಜನಜಾಗೃತಿ ಸಮಿತಿ ಒತ್ತಾಯಿಸಿದೆ.
ಇನ್ನೂ ಸಾಕಷ್ಟು ಗಣೇಶ ಉತ್ಸವಗಳು ಬಾಕಿ ಇದ್ದು, ಮುಂಬರುವ ಗಣೇಶೋತ್ಸವ ಸಂದರ್ಭದಲ್ಲಿ ಹಿಂದೂಗಳಿಗೆ ಸೂಕ್ತ ಭದ್ರತೆ ನೀಡುವಂತೆ ಹಿಂದೂ ಜನಜಾಗೃತಿ ಸಮಿತಿ, ಬೆಂಗಳೂರು ಸಮನ್ವಯಕ ಶರತ್ ಕುಮಾರ್ ಮನವಿ ಮಾಡಿದ್ದಾರೆ.