ಚಿಕ್ಕಮಗಳೂರು:- ಹಿಂದೂ ಮುಖಂಡನ ಮೇಲೆ ಬಿಜೆಪಿ ಕಾರ್ಯಕರ್ತರಿಂದ ಹಲ್ಲೆ ನಡೆದಿರುವ ಆರೋಪ ಕೇಳಿ ಬಂದಿದೆ. ಚಿಕ್ಕಮಗಳೂರು ತಾಲೂಕಿನ ಉಜೈನಿ ಮತಗಟ್ಟೆ ಬಳಿ ಘಟನೆ ಜರುಗಿದೆ.
IPL 2024: ಟಾಸ್ ಗೆದ್ದ ಪಂಜಾಬ್ ಬೌಲಿಂಗ್ ಆಯ್ಕೆ, ಕೆಕೆಆರ್ ಬ್ಯಾಟಿಂಗ್..!
ಮತಗಟ್ಟೆಗಳ ವೀಕ್ಷಕನಾಗಿ ತೆರಳಿದಾಗ ಹಿಂದೂ ಕಾರ್ಯಕರ್ತ ಪ್ರವೀಣ ಖಾಂಡ್ಯ ಮೇಲೆ ಏಕಾಏಕಿ ಗುಂಪೊಂದು ಹಲ್ಲೆ ಮಾಡಿದೆ. ಇದರಿಂದ ಪ್ರವೀಣ್ ಖಾಂಡ್ಯಗೆ ತಲೆ ಮತ್ತು ಕೈಗೆ ಗಂಭೀರ ಗಾಯವಾಗಿದ್ದು, ಬಾಳೆಹೊನ್ನೂರು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಹೇಳಲಾಗಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದ. ಇದೀಗ ಆತನ ಮೇಲೆ ಏಕಾಎಕಿ ದಾಳಿ ಆಗಿದ್ದು, ಹಳೆಯ ದ್ವೇಷದ ಹಿನ್ನೆಲೆ ಬಿಜೆಪಿ ಕಾರ್ಯಕರ್ತರೇ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.