ಬಾಗಲಕೋಟೆ ಮಕ್ಕಳು ಶಾಲಾ, ಕಾಲೇಜು ಅವಧಿಯಲ್ಲಿ ಸಮಾನ ವಯಸ್ಕರ ಜೊತೆಗೆ ಮೋಜಿಗಾಗಿ ಈಜಾಡಲು ಹೋಗಿ ಪ್ರಾಣ ಕಳೆದುಕೊಳ್ಳುತ್ತಿರುವ ಘಟನೆಗಳು ಮೇಲಿಂದ ಮೇಲೆ ಸಂಭವಿಸುತ್ತಿರುವ ಬಗ್ಗೆ ವರದಿಯಾಗುತ್ತಿದ್ದು, ಮಕ್ಕಳ ಪಾಲಕರು ಮಕ್ಕಳ ಮೇಲೆ ನಿಗಾವಹಿಸುವಂತೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷೆ ಜಾನಕಿ ಕೆ.ಎಂ ಕೋರಿದ್ದಾರೆ.
ಕಳೆದ ಮೇ 20 ರಂದು ರಬಕವಿ-ಬನಹಟ್ಟಿ ತಾಲೂಕಿನ ಹೊಸೂರ ಗ್ರಾಮದ ಕೆರೆಯಲ್ಲಿ 13 ಮತ್ತು 10 ವರ್ಷದ ಇಬ್ಬರು ಮಕ್ಕಳು ಈಜಾಡಲು ಹೋಗಿ ಮೃತಪಟ್ಟಿರುತ್ತಾರೆ.
![Demo](https://ainlivenews.com/wp-content/uploads/2023/12/spoorthi-1.jpg)
ಅದೇ ತಾಲೂಕಿನ ಹಳಿಂಗಳಿ ಗ್ರಾಮದ ಜಾಕವೆಲ್ದಲ್ಲಿ 23 ವರ್ಷದ ಯುವಕ ಕೂಡ ಈಜಲು ಹೋಗಿ ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ಸಂಭವಿಸಿರುವುದು ಆಘಾತಕಾರಿಯಾದ ವಿಷಯವಾಗಿದೆ.
ಕಳೆದ ವಾರದಲ್ಲಿ ಹಾಸನ ಜಿಲ್ಲೆಯ ಆಲೂರು ತಾಲೂಕಿನ ತಿಮ್ಮನಹಳ್ಳಿ ಗ್ರಾಮದಲ್ಲಿ ಈಜಲು ಹೋಗಿ 4 ಜನ ಮಕ್ಕಳು ಮೃತಪಟ್ಟಿ ವರದಿಯಾಗಿದೆ.
ಆದ್ದರಿಂದ ಪಾಲಕರು ತಮ್ಮ ಮಕ್ಕಳನ್ನು ಕೆರೆ, ನದಿ, ನದಿ, ಜಾಕೆವೆಲ್ ಹಾಗೂ ಇತರೆ ನೀರಿನ ಮೂಲಗಳ ಕಡೆಗೆ ಈಜಲು ಬಿಡದೇ ಮನೆಯಲ್ಲಿಯೇ ರಜಾ ಅವಧಿಗಳನ್ನು ಸಂತೋಷದಿಂದ ಕಳೆಯುವಂತೆ ನೋಡಿಕೊಳ್ಳಲು ಹಾಗೂ ಅವರ ಮೇಲೆ ಸೂಕ್ತ ನಿಗಾವಹಿಸುವಂತೆ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ಕೋರಿದ್ದಾರೆ.
ಪ್ರಕಾಶ ಕುಂಬಾರ
ಬಾಗಲಕೋಟೆ
![](https://ainlivenews.com/wp-content/uploads/2024/01/Ad-Banner-copy-scaled.jpg)