ಬೆಂಗಳೂರು:- ಸಚಿವ ಪರಮೇಶ್ವರ್ ಮಾಧ್ಯಮಗಳೊಂದಿಗೆ ಮಾತನಾಡಿ, ಜಾತಿ ಗಣತಿ ಬಗ್ಗೆ ಊಹಾಪೋಹ ಬೇಡ ಎಂದು ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಶಾಶ್ವತ ಹಿಂದುಳಿದ ವರ್ಗಗಳ ಆಯೋಗವು ನಡೆಸಿದ ಜಾತಿ ಗಣತಿ ವರದಿಯಲ್ಲಿ ಏನಿದೆ ಎಂದು ತಿಳಿದುಕೊಳ್ಳದೇ ಊಹಿಸಿಕೊಂಡು ವ್ಯಾಖ್ಯಾನ ಮಾಡುವುದು ಸರಿಯಲ್ಲ ಎಂದರು.
ಹಿಂದುಳಿದ ವರ್ಗದಲ್ಲಿ ನೂರಕ್ಕೂ ಅಧಿಕ ಜಾತಿಗಳಿವೆ. ಕೆಲವು ಜಾತಿಗಳಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಸಮರ್ಪಕವಾಗಿ ಮೀಸಲಾತಿ ಲಬಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿತ್ತು. ಆದ್ದರಿಂದ ಈ ಹಿಂದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಕಾಂತರಾಜು ಅವರ ಅಧ್ಯಕ್ಷತೆಯಲ್ಲಿ ಆಯೋಗ ರಚಿಸಿದ್ದರು. ಆಯೋಗ ನೀಡಿರುವ ವರದಿಯಲ್ಲಿ ಏನಿದೆ ಎಂದು ಊಹಿಸಿಕೊಂಡು ವ್ಯಾಖ್ಯಾನ ಮಾಡುತ್ತಿರುವುದು ಸರಿಯಲ್ಲ ಎಂದು ಸ್ಪಷ್ಟಪಡಿಸಿದರು.