ಬೆಂಗಳೂರು:- ರಾಜ್ಯದಲ್ಲಿ ಪ್ರಾಮಾಣಿಕ ಅಧಿಕಾರಿಗಳಿಗೆ ಕವಡೆ ಕಾಸಿನ ಬೆಲೆ ಇಲ್ಲ ಎಂದು ಎನ್.ರವಿಕುಮಾರ್ ಹೇಳಿದ್ದಾರೆ.
ಇಲ್ಲಿ ಕೇಳಿ ಜನರೇ, ಬೇಸಿಗೆಯಲ್ಲಿ ಬಿಪಿಯಿಂದ ತಪ್ಪಿಸಿಕೊಳ್ಳೋದು ಹೇಗೆ ಗೊತ್ತಾ!?
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರಾಮಾಣಿಕ ಅಧಿಕಾರಿಗಳಿಗೆ ಕವಡೆ ಕಾಸಿನ ಬೆಲೆಯೂ ಇಲ್ಲ ಎಂಬುದು ಮತ್ತೆ ಮತ್ತೆ ಸಾಬೀತಾಗುತ್ತಿದೆ. ಭದ್ರಾವತಿಯಲ್ಲಿ ಭೂ ಮತ್ತು ಗಣಿ ವಿಜ್ಞಾನ ಇಲಾಖೆಯಲ್ಲಿ ಕೆಲಸ ಮಾಡುವ ಮಹಿಳಾ ಅಧಿಕಾರಿ ಜ್ಯೋತಿಯವರಿಗೆ ಶಾಸಕ ಸಂಗಮೇಶ್ ಅವರ ಪುತ್ರ ಬಸವೇಶ್ ಎಂಬವರು ಅತ್ಯಂತ ಕೆಳಮಟ್ಟದ ಭಾಷೆ ಉಪಯೋಗಿಸಿ ಬೈದಿದ್ದಾರೆ. ಆ ಭಾಷೆ ಉಪಯೋಗಿಸಲು ನನಗೂ ನಾಚಿಕೆ ಆಗುತ್ತದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಸಿದ್ದರಾಮಯ್ಯನವರು ಬಸವೇಶ್ ಅವರನ್ನು ಬಂಧಿಸಲು ಸೂಚಿಸಿ ಕಠಿಣ ಶಿಕ್ಷೆ ವಿಧಿಸುವಂತೆ ನೋಡಿಕೊಳ್ಳಬೇಕು. ಇದುವರೆಗೆ ಯಾಕೆ ಅವರನ್ನು ಬಂಧಿಸಿಲ್ಲ? ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲವೇ? ಮಹಿಳೆಯರಿಗೆ ಹೇಗೆ ಬೇಕೋ ಹಾಗೆ ಬೈಯ್ಯುವುದೇ? ರಾಜ್ಯದಲ್ಲಿ ಏನು ನಡೆಯುತ್ತಿದೆ. ಸಿದ್ದರಾಮಯ್ಯರಂಥ ಒಬ್ಬ ಸಮರ್ಥ ಮುಖ್ಯಮಂತ್ರಿ ರಾಜ್ಯದಲ್ಲಿ ಇದ್ದರೂ ಕೂಡ ಹೀಗಾಗುತ್ತಿದೆ. ಎರಡನೇ ಬಾರಿ ಸಿಎಂ ಆದ ಬಳಿಕ ಅವರು ಸಂಪೂರ್ಣ ವಿಫಲವಾಗಿದ್ದಾರೆ ಎಂದು ಟೀಕಿಸಿದ್ದಾರೆ.
ಇಷ್ಟೊಂದು ದಾದಾಗಿರಿ, ಗೂಂಡಾಗಿರಿ ರಾಜ್ಯದಲ್ಲಿ ನಡೆಯುತ್ತಿದೆ. ರಾತ್ರಿ ಅಕ್ರಮವಾಗಿ ಮರಳುದಂಧೆ ತಡೆಗಟ್ಟಲು ಹೋದ ಅಧಿಕಾರಿಗೆ ಸಂಗಮೇಶರ ಸುಪುತ್ರ ಇಷ್ಟೊಂದು ದಾದಾಗಿರಿ, ಗೂಂಡಾಗಿರಿ ಮಾಡಿದ್ದಾರೆ. ಜ್ಯೋತಿಯವರು ರಾತ್ರಿ ಅಕ್ರಮವಾಗಿ ಮರಳುದಂಧೆ ಮಾಡುತ್ತಿದ್ದ ವ್ಯಕ್ತಿಗಳನ್ನು ಬಂಧಿಸಲು ಹೋಗಿದ್ದರು. ಮರಳು ದಂಧೆಗೆ ಬೆಂಬಲ ನೀಡುವ ಶಾಸಕ ಮತ್ತು ಅವರ ಪುತ್ರನ ಮೇಲೆ ಸರ್ಕಾರ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ