ಬೆಂಗಳೂರು: ಮನೆಯ ಎರಡನೇ ಯಜಮಾನರಿಗೂ ಅನ್ನ ಭಾಗ್ಯ ಹಣ ನೀಡುವ ಮೂಲಕ ಆಹಾರ ಇಲಾಖೆ ರಾಜ್ಯದ ಜನತೆಗೆ ಗುಡ್ ನ್ಯೂಸ್ ನೀಡಿದೆ.ಈ ಕುರಿತ ಡೀಟೈಲ್ಸ್ ಇಲ್ಲಿದೆ. ಸರ್ಕಾರ ನೀಡಿರುವ ಯೋಜನೆಗಳಲ್ಲಿ ಒಂದಲ್ಲ ಒಂದು ಕೊರತೆಗಳಿದ್ದು,ಅನ್ನ ಭಾಗ್ಯ ಯೋಜನೆ ಬಗ್ಗೆ ಯು ಸಾಕಷ್ಟು ದೂರುಗಳು ಬಂದಿವೆ.ಅನ್ನ ಭಾಗ್ಯ ಯೋಜನೆ DBT ಪ್ರತಿ ತಿಂಗಳು 8 ರಿಂದ 10 ಸಾವಿರ ಜನರಿಗೆ ಸಿಗದೆ ದೂರುಗಳು ಹೆಚ್ಚಾಗುತ್ತಲೆ ಇತ್ತು. ಈ ಹಿಂದೆ ಕೇವಲ ಕೇವಲ ಕಾರ್ಡ್ ನ ಮೊದಲ ಯಜಮಾನರಿಗೆ DBTಮೂಲಕ ಹಣ ಹಾಕಲಾಗುತ್ತಿತ್ತು.
ಈಗ ಈ ಗ್ಯಾರಂಟಿ ಯೋಜನೆಯಲ್ಲಿ ಮುಖ್ಯವಾದ ಅನ್ನಭಾಗ್ಯ ಯೋಜನೆ ಅಡಿ ಸರ್ಕಾರ ತನ್ನ ದೃಷ್ಟಿ ನೆಟ್ಟಿದೆ. ಪಡಿತರ ಕಾರ್ಡ್ (Ration Card) (ಬಿಪಿಎಲ್ ಅಥವಾ ಅಂತ್ಯೋದಯ ಕಾರ್ಡ್ – BPL or Antyodaya Card) ಅನ್ನು ಹೊಂದಿದ್ದರೂ ಕಳೆದ ಆರು ತಿಂಗಳಿಂದ ಯಾರು ಪಡಿತರವನ್ನು ಪಡೆದುಕೊಂಡಿಲ್ಲವೋ ಅಂಥವರ ಕಾರ್ಡ್ಗಳನ್ನು ರದ್ದು ಪಡಿಸಲು ಸರ್ಕಾರ ಮುಂದಾಗಿದೆ. ಇದರ ಪ್ರಕಾರ 3.26 ಲಕ್ಷ ಪಡಿತರ ಕಾರ್ಡ್ಗಳು ರದ್ದುಗೊಳ್ಳಲಿವೆ. ಹೀಗೆ ರದ್ದುಗೊಂಡರೆ ಈ ಎಲ್ಲ ಫಲಾನುಭವಿಗಳ ಖಾತೆಗೆ ಅನ್ನಭಾಗ್ಯ ಮತ್ತು ಗೃಹಲಕ್ಷ್ಮಿ (Anna Bhagya and Gruha Lakashmi Scheme) ಹಣವನ್ನು ಹಾಕುವುದು ತಪ್ಪಲಿದೆ.
ಆರು ತಿಂಗಳಿಂದ ಪಡಿತರ ಪಡೆಯದೇ ಇರುವ ಎಲ್ಲ 3.26 ಲಕ್ಷಕ್ಕೂ ಅಧಿಕ ಪಡಿತರ ಕಾರ್ಡ್ಗಳು ಪತ್ತೆಯಾಗಿವೆ. ಹೀಗಾಗಿ ಇವುಗಳ ದತ್ತಾಂಶವನ್ನು ಸಮರ್ಪಕವಾಗಿ ಸಂಗ್ರಹ ಮಾಡಿ ರದ್ದು ಮಾಡಲು ರಾಜ್ಯ ಸರ್ಕಾರ ಸಹ ಆದೇಶ ನೀಡಿದೆ. ಇದರಿಂದ ಯಾವೆಲ್ಲ ಗ್ಯಾರಂಟಿ ಯೋಜನೆಗೆ ಪಡಿತರ ಚೀಟಿ ಬೇಕೋ ಅದೆಲ್ಲದಕ್ಕೂ ಕಡಿವಾಣ ಬೀಳುವ ಲಕ್ಷಣ ಕಾಣುತ್ತಿದೆ.
ಆದ್ರೀಗ ದೂರುಗಳು ಹೆಚ್ಚಾಗಿದ್ದರಿಂದ ಮನೆಯ ಎರಡನೇ ಯಜಮಾನರಿಗೂ ಹಣ ಹಾಕುವುದಾಗಿ ನಿರ್ಧರಿಸಲಾಗಿದೆ. ಈಗಾಗಲೇ ಕ್ಯಾಬಿನೆಟ್ ಒಪ್ಪಿಗೆ ಸಿಕ್ಕಿದ್ದು, ಅಧಿಕೃತವಾಗಿ ಈ ತಿಂಗಳಿನಿಂದ ಜಾರಿ ಮಾಡಲಾಗುತ್ತದೆ.ಇದರಿಂದ ಸುಮಾರು 9ಲಕ್ಷಕ್ಕೂ ಹೆಚ್ಚು ಬಿಪಿಎಲ್ ಕಾರ್ಡ್ ದಾರರಿಗೆ ಇದರ ಲಾಭ ಸಿಗಲಿದೆ. ಒಟ್ಟಿನಲ್ಲಿ ಯೋಜನೆಗಳು ಘೋಷಣೆ ಆಗಿ ಜಾರಿಗೆ ಬಂದರು ಸರಿಯಾಗಿ ಸಮರ್ಪಕವಾಗಿ ನಿರ್ವಹಣೆ ಆಗದೆ ದೂರುಗಳ ಸರಮಾಲೆಯೆ ಕಾಣುತ್ತಿದ್ದು ಇನ್ನು ಮುಂದೆ ಆದರು ಜನರಿಗೆ ಯೋಜನೆಗಳ ಪ್ರಯೋಜನ ಸರಿಯಾಗಿ ಸಿಗಲಿದೆಯ ನೋಡಬೇಕಿದೆ.