ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಸೋತ ಬಳಿಕ ಮೈದಾನದಲ್ಲೇ ಲಕ್ನೋ ಮಾಲೀಕ ಮತ್ತು ಕೆಎಲ್ ರಾಹುಲ್ ನಡುವೆ ಜಗಳವಾಗಿದೆ.
ಮುಸ್ಲಿಂ ಯುವತಿ ಮದುವೆಯಾದ ಹಿಂದೂ ಯುವಕ…! ಹಿಂದೂಪರ ಕಾರ್ಯಕರ್ತರಿಂದ ಪ್ರತಿಭಟನೆ!
ನಿನ್ನೆ ಹೈದರಾಬಾದ್ನ ರಾಜಿವ್ ಗಾಂಧಿ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಎಲ್ಎಸ್ಜಿ ಬೌಲರ್ಗಳನ್ನು ಮನಬಂದಂತೆ ದಂಡಿಸಿದ ಎಸ್ಆರ್ಹೆಚ್ ಕೇವಲ 9.4 ಓವರ್ಗಳಲ್ಲಿ ವಿಕೆಟ್ ಕಳೆದುಕೊಳ್ಳದೆ 167 ರನ್ ಚಚ್ಚಿ ಗೆದ್ದು ಬೀಗಿತು. ಈ ಗೆಲುವು ಪ್ಯಾಟ್ ಕಮ್ಮಿನ್ಸ್ ಪಡೆಗೆ ದೊಡ್ಡ ಪ್ಲಸ್ ಪಾಯಿಂಟ್ ಆದರೆ, ಇತ್ತ ರಾಹುಲ್ ಪಡೆಯ ಪ್ಲೇ ಆಫ್ ಕನಸು ಮತ್ತಷ್ಟು ದೂರವಾಯಿತು. ಈ ಆಘಾತದ ನಡುವೆ ಪಂದ್ಯ ಮುಗಿದ ಬಳಿಕ ವಿಶೇಷ ಘಟನೆಯೊಂದು ನಡೆದಿದೆ.
ಹೀನಾಯ ಸೋಲಿನ ನಂತರ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾಲೀಕ ಸಂಜೀವ್ ಗೊಯೆಂಕಾ ಕೋಪಗೊಂಡಿದ್ದಾರೆ. ತಂಡ ನೀಡಿದ ಪ್ರದರ್ಶನದಿಂದ ಅಸಮಾಧಾನಗೊಂಡಂತೆ ಕಂಡುಬಂತು. ಸಂಜೀವ್ ಅವರು ನಾಯಕ ಕೆಎಲ್ ರಾಹುಲ್ ಅವರೊಂದಿಗೆ ಕೋಪದಲ್ಲಿ ಮಾತನಾಡುತ್ತಿರುವುದು ಕಂಡುಬಂದಿದೆ. ಇವರಿಬ್ಬರ ನಡುವಣ ಮಾತುಕತೆ ಏನು ಎಂಬುದು ಸ್ಪಷ್ಟವಾಗಿ ಕೇಳಿಸಿಲ್ಲವಾದರೂ, ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ವಿಡಿಯೋವನ್ನು ಗಮನಿಸಿರುವ ನೆಟ್ಟಿಗರು ಇವರಿಬ್ಬರು ಜಗಳ ಆಡುತ್ತಿದ್ದಾರೆ ಎಂದು ಹೇಳುತ್ತಿದ್ದಾರೆ.
ಈ ಪಂದ್ಯದಲ್ಲಿ ಲಕ್ನೋ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಆದರೆ, ಗಳಿಸಿದ್ದು 164 ರನ್ಗಳನ್ನು ಮಾತ್ರ. ನಾಯಕ ರಾಹುಲ್ 33 ಎಸೆತಗಳಲ್ಲಿ 29 ರನ್ ಗಳಿಸಿದರು. ಆಯುಷ್ ಬದೋನಿ 30 ಎಸೆತಗಳಲ್ಲಿ 55 ಮತ್ತು ನಿಕೋಲಸ್ ಪೂರನ್ 26 ಎಸೆತಗಳಲ್ಲಿ 48 ರನ್ ಗಳಿಸಿದರು.
ಇದಕ್ಕೆ ಉತ್ತರವಾಗಿ ಟ್ರಾವಿಸ್ ಹೆಡ್ 30 ಎಸೆತಗಳಲ್ಲಿ 89 ರನ್ ಮತ್ತು ಅಭಿಷೇಕ್ ಶರ್ಮಾ 28 ಎಸೆತಗಳಲ್ಲಿ 75 ರನ್ ಸಿಡಿಸಿ ಸ್ಫೋಟಕ ಬ್ಯಾಟಿಂಗ್ ಮಾಡಿ 9.4 ಓವರ್ಗಳಲ್ಲಿ 62 ಎಸೆತಗಳು ಬಾಕಿ ಇರುವಂತೆಯೇ ಮೊತ್ತವನ್ನು ಬೆನ್ನಟ್ಟುವ ಮೂಲಕ ಹೈದರಾಬಾದ್ ಅಮೋಘ ಜಯ ಕಂಡಿತು. ಈ ಜಯದೊಂದಿಗೆ ಎಸ್ಆರ್ಹೆಚ್ ಆಡಿದ 12 ಪಂದ್ಯಗಲ್ಲಿ ಏಳು ಜಯ ಮತ್ತು ಐದರಲ್ಲಿ ಸೋಲು ಕಂಡು 14 ಅಂಕ ಸಂಪಾದಿಸಿ ಮೂರನೇ ಸ್ಥಾನಕ್ಕೆ ಜಿಗಿದಿದೆ.