ಹುಬ್ಬಳ್ಳಿ: ಯುವಕರ ಗುಂಪೊಂದು ಯುವಕನೋರ್ವನಿಗೆ ಕ್ಷುಲ್ಲಕ ವಿಚಾರಕ್ಕೆ ಚಾಕು ಇರಿದಿರುವ ಘಟನೆ ನಗರದ ಸಿಬಿಟಿ ಬಸ್ ನಿಲ್ದಾಣದ ಹಿಂದೆ ನಡೆದಿದೆ.ಇಕ್ಬಾಲ್ ಎಂಬ ಯುವಕನಿಗೆ ಚಾಕು ಇರಿಯಲಾಗಿದ್ದು, ಚಾಕು ಇರಿದ ಐವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನು ಹಲ್ಕೆಗೊಳಗಾದ ಯುವಕನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ.
ರಂಜಾನ್ ಹಬ್ಬದ ಪ್ರಾರ್ಥನೆ ಮುಗಿಸಿಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಎಂಟತ್ತು ಜನರಿದ್ದ ಗುಂಪಿನಲ್ಲಿ ಓರ್ವ ಚಾಕು ಇರಿದಿದ್ದಾನೆಂದು ತಿಳಿದು ಬಂದಿದೆ. ಇಕ್ಬಾಲ್ ಕಾಲಿಗೆ ಮಾರಣಾಂತಿಕವಾಗಿ ಚಾಕು ಇರಿಯಲಾಗಿದ್ದು, ಕೊಲೆ ಪ್ರಕರಣದಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ತಾಬ್ ,ಮಲ್ಲಿಕ್, ಫರ್ದಿನ್, ಮಹಮ್ಮದ್ ಸಾಧಿಕ್, ಮಹಮ್ಮದ್ ಉಜೈಪ್ ಎಂಬ ಯುವಕರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಾಗುತ್ತಿದ್ದು, ಘಟನೆ ಕುರಿತು ನಿಖರ ಮಾಹಿತಿ ತಿಳಿದು ಬರಬೇಕಿದೆ. ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ..
ತಿಂಗಳ ಮೊದಲ ದಿನ ಉಪ್ಪು ಖರೀದಿಸಿ ಸಾಕು, ಲಕ್ಷ್ಮಿ ಕೃಪೆ-ದುಡ್ಡು ಎಲ್ಲವೂ ಸಿಗುತ್ತೆ..!
ಒಟ್ಟಿನಲ್ಲಿ “ಮೈ ಹೂನ್ ಡಾನ್” ಇಲ್ಲಿ ನಾನೇ ದಾದಾ, ನಂದೇ ಹವಾ ಎಂಬ ಮಧ, ಹರಿಹರೆಯದ ಯುವಕರಲ್ಲಿ ಮನೆ ಮಾಡಿದೆ. ಈ ನಡುವೆ ದಿನೇದಿನೇ ಕಾನೂನು ಸುವ್ಯವಸ್ಥೆ ಕಾಪಾಡಲು ಹುಬ್ಬಳ್ಳಿ ಧಾರವಾಡ ಪೋಲಿಸ್ ಕಮಿಷನರೇಟ್ ಶ್ರಮಿಸುತ್ತಿದ್ದು ಕ್ಷುಲಕ ವಿಚಾರಕ್ಕೆ ಕೊಲೆ, ಹೊಡೆದಾಟ ಮಾರಣಾಂತಿಕ ಹಲ್ಲೆಯಂತಹ ಪ್ರಕರಣಗಳು ಇದೀಗ ಸರ್ವೇ ಸಾಮಾನ್ಯವಾಗಿದೆ.
ಅಲ್ದೇ ಯಾರ ಭಯವೇ ಇಲ್ಲದ ವಾತಾವರಣ ಮತ್ತೆ ಸೃಷ್ಟಿಯಾಗಿದೆ, ಇದು ವ್ಯವಸ್ಥೆಯ ಪರಿಣಾಮವೋ ಅಥವಾ, ನಮ್ಮ ಹಿಂದೆ ಪ್ರಭಾವಿಗಳು ಇದ್ದಾರೆ ಎಂಬ ದೈರ್ಯವೋ ಗೊತ್ತಿಲ್ಲ.ಇದ್ರಿಂದಾಗಿಯೇ ಇಂತಹ ಅಪರಾಧ ಚಟುವಟಿಕೆಗಳಿಗೆ ಹುಮ್ಮಸ್ಸು ನೀಡುತ್ತಿದೆಯೋ…? ಅನ್ನೋ ಪ್ರಶ್ನೆ ಜನಸಾಮಾನ್ಯರಲ್ಲಿ ಮೂಡುತ್ತಿದೆ. ಇನ್ನಾದ್ರೂ ಇಂತಹ ಘಟನೆಗಳು ಮರುಕಳಿಸದಂತೆ ಪೊಲೀಸ್ ಇಲಾಖೆ ಮತ್ತಷ್ಟು ಕಾನೂನು ಕ್ರಮ ಬಿಗಿಗೊಳಿಸಬೇಕಿದೆ.