ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಮಹಾತ್ಮಾ ಗಾಂಧೀಜಿ ಜಯಂತಿಯನ್ನು ಆಚರಿಸಲಾಯಿತು. ಆದರೆ, ಸ್ವತಂತ್ರ ಭಾರತದ ಮೊದಲ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿಯವರಿಗೆ ಅವಮಾನ ಮಾಡಲಾಯಿತು. ಹೌದು, ಇಂದು ಮಹಾತ್ಮ ಗಾಂಧಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜಯಂತಿ. ಆದರೆ, ಪಾಲಿಕೆ ಹಾಗೂ ವಿವಿಧ ಸಂಘಟನೆಗಳು ಕೇವಲ ಗಾಂಧಿ ಜಯಂತಿ ಆಚರಣೆ ಮಾಡಿ ಮಾಜಿ ಪ್ರಧಾನಿ ಅವಮಾನ ಎಸಗಿದ್ದಾರೆ.
ಸೌಜನ್ಯಕ್ಕೂ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಒಂದು ಫೋಟೋ ಇಡದೆ ಅವಮಾನ ಎಸಗಿದ್ದಾರೆ. ಮಹಾನಗರ ಪಾಲಿಕೆ ಮತ್ತು ವಿವಿಧ ಸಂಘಟನೆಗಳಿಂದ ಈ ಎಡವಟ್ಟು ನಡೆದಿದೆ. ಹುಬ್ಬಳ್ಳಿಯ ಕಿಮ್ಸ್ ಗೇಟ್ ಬಳಿಯ ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಪಾಲಿಕೆ ಮೇಯರ್ ರಾಮಣ್ಣ ಬಡಿಗೇರ, ಪಾಲಿಕೆ ಆಯುಕ್ತ ಈಶ್ವರ್ ಉಳ್ಳಾಗಡ್ಡಿ ಮತ್ತಿತರರು ಮಾಜಿ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರಿಗೆ ಅವಮಾನ ಮಾಡಿದ್ದಾರೆ.