ಹುಬ್ಬಳ್ಳಿ: ಬಾಗಲಕೋಟೆ ಲೋಕಸಭೆ ಕ್ಷೇತ್ರದ ಚುನಾವಣೆ ಉಸ್ತುವಾರಿಯಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹುಬ್ಬಳ್ಳಿಯ ಪಾರಸಮಲ್ ಜೈನ್ ನೇಮಕಗೊಂಡಿದ್ದಾರೆ.
PM ಮೋದಿ ಅವರಿಗೆ ಎಲ್ಲ ರೀತಿಯಲ್ಲಿ ಹಿನ್ನಡೆ ಮಾಡಬೇಕು ಎಂಬ ಷಡ್ಯಂತ್ರ ಇದೆ- ಜೋಶಿ
ಕ್ಷೇತ್ರದ ವ್ಯಾಪ್ತಿಯ ಉಸ್ತುವಾರಿ ಸಚಿವರು, ಜಿಲ್ಲೆಯ ಸಚಿವರು, ಹಿರಿಯ ನಾಯಕರು, ಶಾಸಕರು, ಡಿಸಿಸಿ ಅಧ್ಯಕ್ಷರು, 2023ರ ವಿಧಾನಸಭೆ ಅಭ್ಯರ್ಥಿಗಳು, ಕೆಪಿಸಿಸಿ ಪದಾಧಿಕಾರಿಗಳು, ಬಿಸಿಸಿ ಅಧ್ಯಕ್ಷರು ಹಾಗೂ ಈ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಕಾರ್ಮಿಕ ಸಂಘಟನೆಗಳು, ಕನ್ನಡಪರ ಸಂಘಟನೆಗಳು, ಯುವ ಸಂಘಟನೆಗಳು, ವಿದ್ಯಾ ಸಂಸ್ಥೆಗಳು, ಕೃಷಿ ಕಾರ್ಮಿಕರು ಹಾಗೂ ಇತರ ಸಂಘ-ಸಂಸ್ಥೆಗಳನ್ನು ಭೇಟಿ ಮಾಡಿ ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮಗಳು ಹಾಗೂ 2024ರ ಚುನಾವಣೆಗೆ ಎಐಸಿಸಿ ನೀಡುತ್ತಿರುವ ಭರವಸೆಗಳ ಬಗ್ಗೆ ಪಾರಸಮಲ್ ಜೈನ್ ಅವರುಗಳಿಗೆ ಮಾಹಿತಿ ನೀಡಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ನೇಮಕ ಆದೇಶದಲ್ಲಿ ಸೂಚಿಸಿದ್ದಾರೆ.