ಬೆಂಗಳೂರು: ಹುಬ್ಬಳ್ಳಿ ಗಲಭೆ ಪ್ರಕರಣದ ಕೇಸ್ ವಾಪಸ್ಸು ಪಡೆದ ವಿಚಾರ ಬಗ್ಗೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು , ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷ ಬಿಜೆಪಿ ಸಮರ ಸಾರಿದ್ದು ಸರ್ಕಾರದ ನಡೆ ವಿರುದ್ಧ ಕೇಂದ್ರಕ್ಕೆ ದೂರು ಕೊಡಲು ನಿರ್ಧಾರ ಮಾಡಲಾಗಿದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.
ಹುಬ್ಬಳ್ಳಿ ಪೊಲೀಸ್ ಠಾಣೆ ಮೇಲೆ ದಾಳಿ, ಗಲಭೆ ಮಾಡಿದವರು ಹಾಗೂ ಕ್ರಿಮಿನಲ್ ಗಳ ಮೇಲೆ ಸರ್ಕಾರ ಕೇಸ್ ದಾಖಲು ಮಾಡಿತ್ತುಇವಾಗ ಒಂದು ಸಮುದಾಯ ವನ್ನು ಓಲೈಕೆ ಮಾಡಲು, ಎಲ್ಲಾ ಕೇಸ್ ವಾಪಸ್ಸು ಪಡೆದಿದ್ದಾರೆಇದು ಸರ್ಕಾರ ಮಾಡಿರುವ ಅಕ್ಷಮ್ಯ ಅಪರಾಧಆರ್ಗನೈಸಡ್ ಕ್ರೈಮ್ ಮಾಡಿರೋ ಕೇಸ್ ವಾಪಸ್ಸು ಪಡೆದಿರೋದು ಕೂಡ ಸರ್ಕಾರದ ಆರ್ಗನೈಸ್ ಕ್ರೈಮ್ ನ ಹೀಗಾಗಿ ಇದನ್ನು ನಾವು ಸುಮ್ಮನೆ ಬಿಡುವುದಿಲ್ಲ, ಇದರ ಬಗ್ಗೆ ಜನರಿಗೆ ತಿಳಿಸಲು ಹೋರಾಟ ಮಾಡುತ್ತೇವೆ
ಇದರ ಬಗ್ಗೆ ನಾವು ಕೋರ್ಟ್ ನಲ್ಲಿ ಅಬ್ಜೆಕ್ಸನ್ ಅರ್ಜಿ ಹಾಕುತ್ತೇವೆ ಉಡುಪಿ, ಮಂಗಳೂರು, ಶಿವಮೊಗ್ಗದಲ್ಲಿನ ಹಿಂದು ಕಾರ್ಯಕರ್ತರ ಮೇಲೆ ಯಾಕೇ ಕೇಸ್ ವಾಪಸ್ಸು ತಗೊಂಡಿಲ್ಲ..? ಅವ್ರು ಕ್ರಿಮಿನಲ್ ಗಳು, ಇವ್ರು ಕ್ರಿಮಿನಲ್ ಗಳು ಅಲ್ವಾ..? ಜನರನ್ನು ಕೆರಳಿಸುವ ಕೆಲಸ ಮಾಡಿ, ಮುಡಾ, ವಾಲ್ಮೀಕಿ ಹಗರಣ ಡೈವರ್ಟ್ ಮಾಡ್ತಿದ್ದೀರಿನಾನು ಇವತ್ತು ಕೇಂದ್ರದ ಕಾನೂನು ಸಚಿವರಿಗೂ ಪತ್ರ ಬರೆಯುತ್ತಿದ್ದೇನೆ
ಈ ಸರ್ಕಾರದ ವಿರುದ್ಧ ಕ್ರಮ ಜರುಗಿಸಬೇಕು ಅಂತಾ ಕೇಂದ್ರ ಸರ್ಕಾರ ತಕ್ಷಣ ಗಂಭೀರವಾಗಿ ಪರಿಗಣಿಸಿ, ತಕ್ಷಣ ಕ್ರಮ ತಗೊಬೇಕು ಪ್ರಧಾನ ಮಂತ್ರಿ ಗಳು, ಕೇಂದ್ರ ಗೃಹ ಸಚಿವರು ಹಾಗೂ ರಾಷ್ಟ್ರಪತಿ ಗಳಿಗೂ ಗಮನ ಸೆಳೆಯಲು ಪತ್ರ ಬರೆಯುತ್ತೇನೆ. ದುಷ್ಟ ಶಕ್ತಿ ಯಾರಾದರೂ ರಾಜ್ಯದಲ್ಲಿ ಇದ್ದಾರೆ ಅಂದರೆ ಅದು ಸಿದ್ದರಾಮಯ್ಯವಿರೋಧ ಪಕ್ಷದ ನಾಯಕ ಚಲವಾದಿ ನಾರಯಣಸ್ವಾಮಿ ತಿರುಗೇಟು.
ಕೆಟ್ಟವರು ಸಂಹಾರ ಆಗಬೇಕು ನಿಜ ಆದರೆ ಸರ್ಕಾರ ಚಾಮುಂಡೇಶ್ವರಿ ಬಳಕೆ ಮಾಡಿ ಜಾಹಿರಾತು ಕೊಟ್ಟಿದ್ದು ತಪ್ಪು ದುಷ್ಟ ಶಕ್ತಿ ಗಳು ರಾಜ್ಯಕ್ಕೆ ಯಾರು ಅಂದರೆ ಅದು ಸಿದ್ದರಾಮಯ್ಯ ಸಿದ್ದರಾಮಯ್ಯ ನವರಿಂದ ದುಷ್ಟ ಶಕ್ತಿಗಳು ಸಂಹಾರ ಆಗಲಿ ಎಂದ ಹೇಳಿದರು.