ಬೆಂಗಳೂರು: ಹುಬ್ಬಳ್ಳಿ ಗಲಭೆ ಕೇಸ್ ವಾಪಸ್ ಪಡೆದ ವಿಚಾರ ಅಂಗವಾಗಿ ಇಂದು ರಾಜ್ಯ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ನಡೆಯಲಿದ್ದು ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ
ಫ್ರೀಡಂ ಪಾರ್ಕ್ ನಲ್ಲಿ ಆರಂಭವಾಗಲಿರುವ ಪ್ರತಿಭಟನೆ ಆ ನಂತರ ರಾಜ್ಯಪಾಲರಿಗೆ ದೂರು ನೀಡಲಿರುವ ಬಿಜೆಪಿ ನಿಯೋಗ
ಪ್ರತಿಭಟನೆಯಲ್ಲಿ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವ ಅಶ್ವಥ್ ನಾರಾಯಣ ಶಾಸಕರು, ಸಂಸದರು, ಪರಿಷತ್ ಸದಸ್ಯರು, ಬೆಂಗಳೂರು ನಗರ ಜಿಲ್ಲಾಧ್ಯಕ್ಷರು ಸೇರಿ ಸಾವಿರಾರು ಬಿಜೆಪಿ ಕಾರ್ಯಕರ್ತರು ಭಾಗಿಯಾಗಲಿದ್ದಾರೆ.
ಹುಬ್ಬಳ್ಳಿ ಗಲಭೆ ಕೇಸ್ ನಲ್ಲಿ ಭಾಗಿಯಾದ ಮುಸ್ಲೀಂ ಆರೋಪಿಗಳಿಗೆ ಕ್ಲೀನ್ ಚಿಟ್ ಕೊಡಲಾಗಿದೆಹಿಂದು ಕಾರ್ಯಕರ್ತರ ಮೇಲಿನ ಕೇಸ್ ವಾಪಸ್ ಪಡೆದಿಲ್ಲಮುಸ್ಲಿಂ ಸಮುದಾಯದ ಓಲೈಕೆಗಾಗಿ ಆರೋಪಿಗಳನ್ನು ಕುಲಾಸೆ ಮಾಡಲಾಗಿದೆಇದು ಸಂವಿಧಾನ ವಿರೋಧಿ ನಡೆ, ಕೇಸ್ ವಾಪಸ್ ಪಡೆದಿರೋ ನಿರ್ಧಾರ ಹಿಂಪಡೆಯಬೇಕು ಒಂದು ಸಮುದಾಯದ ಓಲೈಕೆ ವಿರುದ್ಧ ಪ್ರತಿಭಟನೆ ಮಾಡಲಿರುವ ಬಿಜೆಪಿ ಟೀಂ….