ವಿಜಯಪುರ:- ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ನಲ್ಲಿ ವಿಕಲಚೇತನರನ್ನ ಕಡೆಗಣಿಸಲಾಗಿದೆ ಈ ಹಿನ್ನಲೆಯಲ್ಲಿ ಕರ್ನಾಟಕ ಅಂಗವಿಕಲರ ರಾಜ್ಯ ಒಕ್ಕೂಟದಿಂದ ಮಾರ್ಚ 19 ರಂದು ಬಸವ ಜನ್ಮ ಸ್ಥಳ ಬಸವನ ಬಾಗೇವಾಡಿಯಿಂದ ಬೆಂಗಳೂರಿನ ವರೆಗೆ ಬೈಕ್ ರ್ಯಾಲಿ ನಡೆಸಲಾಗುವದು ನಂತರ ಪ್ರೀಡಂ ಪಾರ್ಕನಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವದು ಎಂದು ಒಕ್ಕೂಟದ ಮುಖಂಡ ಮಲ್ಲಿಕಾರ್ಜುನ ಬಿರಾದಾರ ಹೇಳಿದರು.
IPL ನಿಯಮ ಉಲ್ಲಂಘನೆ: ಇಂಗ್ಲೆಂಡ್ ಆಟಗಾರನಿಗೆ 2 ವರ್ಷ ನಿಷೇಧ ಹೇರಿದ BCCI!
ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ ಅಂಗವಿಕಲರ ವಿವಿಧ ಬೇಡಿಕೆ ಈಡೇರಿಕೆಗಾಗಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು ಬೇಡಿಕೆ ಈಡೇರುವ ವರೆಗೆ ಪ್ರತಿಭಟನೆಯನ್ನ ಕೈ ಬಿಡುವುದಿಲ್ಲ ಎಂದರು…